32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಬಿಡಿ ಭಾಗಗಳ ತಯಾರಿಕಾ ಕಂಪೆನಿಯಾದ ಭವಾನಿ ಇಂಡಸ್ಟ್ರೀಸ್ ವತಿಯಿಂದ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ಲೋಕೆಶ್‌ ರೆಡ್ಡಿಯವರು ಸಂದರ್ಶನವನ್ನು ನಡೆಸಿದರು. ಫಿಟ್ಟರ್ ಮತ್ತು ಟರ್ನರ್ ವಿಭಾಗದ ಒಟ್ಟು 32 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕೆಶ್‌ ರೆಡ್ಡಿಯವರು ಕೈಗಾರಿಕಾ ವಲಯದಲ್ಲಿ ಐಟಐ ವಿದ್ಯಾರ್ಥಿಗಳಿಗಿರುವ ಬೃಹತ್‌ ಉದ್ಯೋಗ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಸ್ವಾಗತಿಸಿದರು. ನೇಮಕಾತಿ ಅಧಿಕಾರಿ ಶ್ರೇಯಸ್ ಹಾಗೂ ಕಿರಿಯ ತರಬೇತಿ ಅಧಿಕಾರಿಗಳಾದ ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಆ.2 : ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು 2026

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya
error: Content is protected !!