August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಬಿಡಿ ಭಾಗಗಳ ತಯಾರಿಕಾ ಕಂಪೆನಿಯಾದ ಭವಾನಿ ಇಂಡಸ್ಟ್ರೀಸ್ ವತಿಯಿಂದ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ಲೋಕೆಶ್‌ ರೆಡ್ಡಿಯವರು ಸಂದರ್ಶನವನ್ನು ನಡೆಸಿದರು. ಫಿಟ್ಟರ್ ಮತ್ತು ಟರ್ನರ್ ವಿಭಾಗದ ಒಟ್ಟು 32 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕೆಶ್‌ ರೆಡ್ಡಿಯವರು ಕೈಗಾರಿಕಾ ವಲಯದಲ್ಲಿ ಐಟಐ ವಿದ್ಯಾರ್ಥಿಗಳಿಗಿರುವ ಬೃಹತ್‌ ಉದ್ಯೋಗ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಸ್ವಾಗತಿಸಿದರು. ನೇಮಕಾತಿ ಅಧಿಕಾರಿ ಶ್ರೇಯಸ್ ಹಾಗೂ ಕಿರಿಯ ತರಬೇತಿ ಅಧಿಕಾರಿಗಳಾದ ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!