26 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿ ಮೇ 2ರಂದು ಬಂಟ್ವಾಳದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ. ಇ(47) ರವರು ದಿನಾಂಕ 29-04-2026 ರಂದು ತನ್ನ ಮಗಳ ಮದುವೆಗೆಂದು ಮನೆಯವರ ಜೊತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದವರು ದೇವರ ದರ್ಶನ ಮುಗಿಸಿ ದೇವಸ್ಥಾನದ ಮುಂಭಾಗದಲ್ಲಿರುವ ಬೃಂದಾವನ ಪಾರ್ಕಿಗೆ ಹೋಗಿ ವಾಪಾಸ್ಸು ಬರುವ ಸಮಯ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ದೇವಸ್ಥಾನ ಮುಂಭಾಗದಿಂದ ಕಾಣೆಯಾಗಿರುತ್ತಾರೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಮೇ.1 ರಂದು ನಾಪತ್ತೆಯಾದ ಮಂಜುನಾಥ್ ಅವರ ಚಿಕ್ಕಪ್ಪನ ಮಗ ದಿನೇಶ್ ಪಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Related posts

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya
error: Content is protected !!