26 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಗೆ ಶಕ್ತಿ ತುಂಬಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ ಕಾಮಧೇನು ಮುಖ್ಯಮಂತ್ರಿ ಯುಡಿಯೂರಪ್ಪನವರು.ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ 2500 ಮಂದಿ ಭಾಗವಹಿಸಲಿದ್ದಾರೆ. ಆಗಮಿಸುವರಿಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ವಿವಿಧ ಗಣ್ಯರು ಹಾಗೂ ನಾಡಿನ ಸ್ವಾಮೀಜಿಗಳು ಸೇರಿದ್ದಂತೆ ಲಕ್ಷ ಮಂದಿ ಜನರು ಭಾಗವಹಿಸುವರು ಎಂದು ಶಾಸಕ ಹರೀಶ್ ಪೂಂಜ ವಿವರಿಸಿದರು.

ಅವರು ಮೇ 2 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ , ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯನಂದ ಗೌಡ ಮತ್ತು ಪ್ರಶಾಂತ್ ಪಾರೆಂಕಿ, ಪ್ರಮುಖರಾದ ವಸಂತಿ ಮಚ್ಚಿನ, ಸೀತರಾಮ ಬೆಳಾಲು ಸಹಿತ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Related posts

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya
error: Content is protected !!