May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಗೆ ಶಕ್ತಿ ತುಂಬಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ ಕಾಮಧೇನು ಮುಖ್ಯಮಂತ್ರಿ ಯುಡಿಯೂರಪ್ಪನವರು.ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ 2500 ಮಂದಿ ಭಾಗವಹಿಸಲಿದ್ದಾರೆ. ಆಗಮಿಸುವರಿಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ವಿವಿಧ ಗಣ್ಯರು ಹಾಗೂ ನಾಡಿನ ಸ್ವಾಮೀಜಿಗಳು ಸೇರಿದ್ದಂತೆ ಲಕ್ಷ ಮಂದಿ ಜನರು ಭಾಗವಹಿಸುವರು ಎಂದು ಶಾಸಕ ಹರೀಶ್ ಪೂಂಜ ವಿವರಿಸಿದರು.

ಅವರು ಮೇ 2 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ , ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯನಂದ ಗೌಡ ಮತ್ತು ಪ್ರಶಾಂತ್ ಪಾರೆಂಕಿ, ಪ್ರಮುಖರಾದ ವಸಂತಿ ಮಚ್ಚಿನ, ಸೀತರಾಮ ಬೆಳಾಲು ಸಹಿತ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!