30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿ ಮೇ 2ರಂದು ಬಂಟ್ವಾಳದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ. ಇ(47) ರವರು ದಿನಾಂಕ 29-04-2026 ರಂದು ತನ್ನ ಮಗಳ ಮದುವೆಗೆಂದು ಮನೆಯವರ ಜೊತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದವರು ದೇವರ ದರ್ಶನ ಮುಗಿಸಿ ದೇವಸ್ಥಾನದ ಮುಂಭಾಗದಲ್ಲಿರುವ ಬೃಂದಾವನ ಪಾರ್ಕಿಗೆ ಹೋಗಿ ವಾಪಾಸ್ಸು ಬರುವ ಸಮಯ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ದೇವಸ್ಥಾನ ಮುಂಭಾಗದಿಂದ ಕಾಣೆಯಾಗಿರುತ್ತಾರೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಮೇ.1 ರಂದು ನಾಪತ್ತೆಯಾದ ಮಂಜುನಾಥ್ ಅವರ ಚಿಕ್ಕಪ್ಪನ ಮಗ ದಿನೇಶ್ ಪಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Related posts

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!