30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಗೆ ಶಕ್ತಿ ತುಂಬಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ ಕಾಮಧೇನು ಮುಖ್ಯಮಂತ್ರಿ ಯುಡಿಯೂರಪ್ಪನವರು.ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ 2500 ಮಂದಿ ಭಾಗವಹಿಸಲಿದ್ದಾರೆ. ಆಗಮಿಸುವರಿಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ವಿವಿಧ ಗಣ್ಯರು ಹಾಗೂ ನಾಡಿನ ಸ್ವಾಮೀಜಿಗಳು ಸೇರಿದ್ದಂತೆ ಲಕ್ಷ ಮಂದಿ ಜನರು ಭಾಗವಹಿಸುವರು ಎಂದು ಶಾಸಕ ಹರೀಶ್ ಪೂಂಜ ವಿವರಿಸಿದರು.

ಅವರು ಮೇ 2 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ , ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯನಂದ ಗೌಡ ಮತ್ತು ಪ್ರಶಾಂತ್ ಪಾರೆಂಕಿ, ಪ್ರಮುಖರಾದ ವಸಂತಿ ಮಚ್ಚಿನ, ಸೀತರಾಮ ಬೆಳಾಲು ಸಹಿತ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Related posts

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!