May 3, 2026
ಪ್ರಮುಖ ಸುದ್ದಿ

ಮೇ. 17: ಶಾಸಕ ಹರೀಶ್ ಪೂಂಜರವರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ, ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮವು ಮೇ 17, ರವಿವಾರ ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ವಿಷುಕಣಿ ಸಮಾರಂಭದ ಪೂರ್ವಭಾವಿ ಸಭೆಯು ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ,ಸಮಿತಿ ಪ್ರಮುಖರ ಮುಂದಾಳತ್ವದಲ್ಲಿ ಗುರುವಾಯನಕೆರೆ ಹವ್ಯಕ ಸಭಾಭವನದಲ್ಲಿ ಮೇ.2ರಂದು ನಡೆಯಿತು.

ವಿಶೇಷವಾಗಿ ವಿಷುಕಣಿ ಆಚರಣೆಯನ್ನು ಕಳೆದ ಐದು ವರ್ಷಗಳಿಂದ ಅತ್ಯಂತ ಅಚ್ಚುಕಟ್ಟಾಗಿ ಆಚರಿಸುತ್ತಿದ್ದು ಈ ಬಾರಿಯು ಸಂತೋಷ, ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಶಾಸಕ ಹರೀಶ್ ಪೂಂಜರವರ ಸಹಕಾರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ
ಕೇರಳದ ಸಾಂಪ್ರದಾಯಿಕ ಶೈಲಿಯ 32 ಬಗೆಯ ಊಟೋಪಚಾರ, ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ಪೂರಕವಾಗಿ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಪ್ರಮುಖರಾದ ಉಜಿರೆ ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್, ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ, ಉದ್ಯಮಿ ಬಾಲಕೃಷ್ಣ ನೈಮಿಷ, ಉದ್ಯಮಿ ದಿವಿನೇಶ್ ಚಾರ್ಮಾಡಿ ಹಾಗೂ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya
error: Content is protected !!