30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ :ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮವು ಮೇ 17, ರವಿವಾರ ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ವಿಷುಕಣಿ ಸಮಾರಂಭದ ಪೂರ್ವಭಾವಿ ಸಭೆಯು ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ,ಸಮಿತಿ ಪ್ರಮುಖರ ಮುಂದಾಳತ್ವದಲ್ಲಿ ಗುರುವಾಯನಕೆರೆ ಹವ್ಯಕ ಸಭಾಭವನದಲ್ಲಿ ನೇ 2ರಂದು ನಡೆಯಿತು. ವಿಶೇಷವಾಗಿ ವಿಷುಕಣಿ ಆಚರಣೆಯನ್ನು ಕಳೆದ ಐದು ವರ್ಷಗಳಿಂದ ಅತ್ಯಂತ ಅಚ್ಚುಕಟ್ಟಾಗಿ ಆಚರಿಸುತ್ತಿದ್ದು ಈ ಬಾರಿಯು ಸಂತೋಷ ,ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.

ಶಾಸಕ ಹರೀಶ್ ಪೂಂಜರವರ ಸಹಕಾರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇರಳದ ಸಾಂಪ್ರದಾಯಿಕ ಶೈಲಿಯ 32 ಬಗೆಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ಪೂರಕವಾಗಿ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಪ್ರಮುಖರಾದ ಉಜಿರೆ ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್, ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಉದ್ಯಮಿ ಬಾಲಕೃಷ್ಣ ನೈಮಿಷ,ಉದ್ಯಮಿ ದಿವಿನೇಶ್ ಚಾರ್ಮಾಡಿ ಹಾಗೂ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya
error: Content is protected !!