August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಪಣೆಜಾಲ್ ನ ಸಂಭ್ರಮ ಸಭಾ ಭವನದಲ್ಲಿ ನೆರವೇರಿತು.

ಮಂಗಳೂರಿನ ಹಿರಿಯ ಯೋಗ ಶಿಕ್ಷಕರಾದ ರವೀಶ್ ಅಣ್ಣ ಭಾಗವಹಿಸಿ, ಯೋಗವು ಆರೋಗ್ಯಕರ ಜೀವನಕ್ಕೆ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರೂ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಸಭಾಧ್ಯಕ್ಷತೆಯನ್ನು ಪಾಂಡುರಂಗ ಶಾಖೆಯ ಸಂಚಾಲಕರಾದ ದಿನೇಶ್ ವಹಿಸಿ ಮಾತನಾಡಿ ಶಾಖೆಯ ಬೆಳವಣಿಗೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ನಮ್ಮ ಮನೆ ಶಾಖೆಯ ಸಂಚಾಲಕರಾದ ಸುಮಲತಾ ಉಪಸ್ಥಿತರಿದ್ದರು. ಪಾಂಡುರಂಗ ಶಾಖೆಯ ಆನಂದ ಸ್ವಾಗತಿಸಿ, ವಾರ್ಷಿಕ ವರದಿಯನ್ನು ಪಾಂಡುರಂಗ ಶಾಖೆಯ ಶಿಕ್ಷಕ ದಯಾನಂದರವರು ವಾಚಿಸಿದರು. ಪಾಂಡುರಂಗ ಶಾಖೆಯ ಜಯಂತಿ ಧನ್ಯವಾದವಿತ್ತರು. ಸಭಾ ಕಾರ್ಯಕ್ರಮದ ನಂತರ ಶ್ರೀ ಪಾಂಡುರಂಗ ಶಾಖೆ ಹಾಗೂ ಮದ್ದಡ್ಕ ಶಾಖೆಯ ಯೋಗ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಪಾಂಡುರಂಗ ಶಾಖೆಯ ಯೋಗ ಬಂಧು ವಿಧ್ಯಾ ವಿಶೇಷ ಮುತುವರ್ಜಿಯಿಂದ ಹಿರಿಯ ಯೋಗ ಬಂಧುಗಳಾದ ರಾಮಕೃಷ್ಣ , ಯೋಗೀಶ್ ರವರ ಸಲಹೆ ಸಹಕಾರದೊಂದಿಗೆ ಪಾಂಡುರಂಗ ಶಾಖೆ, ನಮ್ಮ ಮನೆ ಶಾಖೆ ಮದ್ದಡ್ಕ ಶಾಖೆಯ ಯೋಗ ಬಂಧುಗಳ ಒಗ್ಗೂಡುವಿಕೆಯಿಂದ ಶಿಕ್ಷಕರಾದ ಪ್ರದೀಪ್ ,ಆನಂದ ಸಹಕರಿಸಿದರು.ಚಿದಾನಂದ ಇಡ್ಯಾ ನಿರೂಪಿಸಿದರು.

Related posts

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!