27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ :ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮವು ಮೇ 17, ರವಿವಾರ ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ವಿಷುಕಣಿ ಸಮಾರಂಭದ ಪೂರ್ವಭಾವಿ ಸಭೆಯು ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ,ಸಮಿತಿ ಪ್ರಮುಖರ ಮುಂದಾಳತ್ವದಲ್ಲಿ ಗುರುವಾಯನಕೆರೆ ಹವ್ಯಕ ಸಭಾಭವನದಲ್ಲಿ ನೇ 2ರಂದು ನಡೆಯಿತು. ವಿಶೇಷವಾಗಿ ವಿಷುಕಣಿ ಆಚರಣೆಯನ್ನು ಕಳೆದ ಐದು ವರ್ಷಗಳಿಂದ ಅತ್ಯಂತ ಅಚ್ಚುಕಟ್ಟಾಗಿ ಆಚರಿಸುತ್ತಿದ್ದು ಈ ಬಾರಿಯು ಸಂತೋಷ ,ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.

ಶಾಸಕ ಹರೀಶ್ ಪೂಂಜರವರ ಸಹಕಾರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇರಳದ ಸಾಂಪ್ರದಾಯಿಕ ಶೈಲಿಯ 32 ಬಗೆಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ಪೂರಕವಾಗಿ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಪ್ರಮುಖರಾದ ಉಜಿರೆ ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್, ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಉದ್ಯಮಿ ಬಾಲಕೃಷ್ಣ ನೈಮಿಷ,ಉದ್ಯಮಿ ದಿವಿನೇಶ್ ಚಾರ್ಮಾಡಿ ಹಾಗೂ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

Related posts

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!