24.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಪಣೆಜಾಲ್ ನ ಸಂಭ್ರಮ ಸಭಾ ಭವನದಲ್ಲಿ ನೆರವೇರಿತು. ಯೋಗದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಅನೇಕ ಯೋಗಬಂಧುಗಳು,ಯೋಗೇತರ ಬಂಧುಗಳು ಹಾಗೂ ಗಣ್ಯರು ಭಾಗವಹಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರಿನ ಹಿರಿಯ ಯೋಗ ಶಿಕ್ಷಕರಾದ ರವೀಶ್ ಭಾಗವಹಿಸಿ, ಯೋಗವು ಆರೋಗ್ಯಕರ ಜೀವನಕ್ಕೆ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರೂ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಸಭಾ ಅಧ್ಯಕ್ಷತೆಯನ್ನು ಪಾಂಡುರಂಗ ಶಾಖೆಯ ಸಂಚಾಲಕರಾದ ದಿನೇಶ್ ವಹಿಸಿಕೊಂಡು, ಶಾಖೆಯ ಬೆಳವಣಿಗೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ನಮ್ಮ ಮನೆ ಶಾಖೆಯ ಸಂಚಾಲಕರಾದ ಸುಮಲತಾ ಉಪಸ್ಥಿತರಿದ್ದರು‌ ಸಭಾ ಕಾರ್ಯಕ್ರಮದ ಸ್ವಾಗತವನ್ನು ಪಾಂಡುರಂಗ ಶಾಖೆಯ ಆನಂದ ಮಾಡಿದರು.ವಾರ್ಷಿಕ ವರಧಿಯನ್ನು ಪಾಂಡುರಂಗ ಶಾಖೆಯ ಶಿಕ್ಷಕ ದಯಾನಂದ ವಾಚಿಸಿದರು. ಪಾಂಡುರಂಗ ಶಾಖೆಯ ಜಯಂತಿ ಧನ್ಯವಾದವಿತ್ತರು. ಸಭಾ ಕಾರ್ಯಕ್ರಮದ ನಂತರ ನಮ್ಮ ಮನೆ ಶಾಖೆ, ಶ್ರೀ ಪಾಂಡುರಂಗ ಶಾಖೆ ಹಾಗೂ ಮದ್ದಡ್ಕ ಶಾಖೆಯ ಯೋಗ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ಕಾರ್ಯಕ್ರಮಗಳು ಪ್ರೇಕ್ಷಕರ ಮನಸ್ಸಿಗೆ ಸಂತೋಷವನ್ನುಂಟುಮಾಡಿ ವಿಶೇಷ ಮೆಚ್ಚುಗೆಯನ್ನು ಪಡೆದವು.ಪಾಂಡುರಂಗ ಶಾಖೆಯ ಯೋಗ ಬಂಧು ವಿಧ್ಯಾರವರ ವಿಶೇಷ ಮುತುವರ್ಜಿಯಿಂದ ಹಿರಿಯ ಯೋಗ ಬಂಧುಗಳಾದ ರಾಮಕೃಷ್ಣ, ಯೋಗೀಶ್ ರವರ ಸಲಹೆ ಸಹಕಾರದೊಂದಿಗೆ ಪಾಂಡುರಂಗ ಶಾಖೆ, ನಮ್ಮ ಮನೆ ಶಾಖೆ ಮದ್ದಡ್ಕ ಶಾಖೆಯ ಯೋಗ ಬಂಧುಗಳ ಒಗ್ಗೂಡುವಿಕೆಯಿಂದ ಶಿಕ್ಷಕರಾದ ಪ್ರದೀಪ್ ,ಆನಂದರವರ ಸಹಕಾರ ದಿಂದ ಚಿದಾನಂದ ಇಡ್ಯಾ ರವರ ನಿರೂಪಣೆಯೊಂದಿಗೆ ಈ ವಾರ್ಷಿಕೋತ್ಸವವು ಯೋಗದ ಮಹತ್ವವನ್ನು ಸಮಾಜಕ್ಕೆ ಸಾರುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಹ ಕಾರ್ಯಕ್ರಮವಾಗಿ ಮೂಡಿಬಂದಿತು.

Related posts

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!