24.7 C
ಪುತ್ತೂರು, ಬೆಳ್ತಂಗಡಿ
May 5, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಧರ್ಮಸ್ಥಳ: “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ದ ಉದ್ಘಾಟನಾ ಸಮಾರಂಭ

ಧರ್ಮಸ್ಥಳ: ದಿನಾಂಕ: 05.05.2026ರಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ”ದ ಉದ್ಘಾಟನಾ ಸಮಾರಂಭವನ್ನು ಧರ್ಮಸ್ಥಳ ಮಂಡಲ ಪಂಚಾಯತ್ ನ ಮಾಜಿ ಪ್ರಧಾನರು, ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರೂ ಆದ ಸುಂದರ ಗೌಡ ಇವರು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿ ಅಂತರ್ಜಾಲಗಳಿಂದ ಮಕ್ಕಳನ್ನು ದೂರವಿರಿಸಲು ಇಂಥ ಶಿಬಿರಗಳು ಅತ್ಯಗತ್ಯ ಹಾಗೂ ಶಿಬಿರದ ಮಹತ್ವವನ್ನ ತಿಳಿಸಿದರು.

ಜಮಾ ಉಗ್ರಾಣದ ಹಿರಿಯ ಮುತ್ಸದಿ ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರೂ ಆದಂತಹ ಬಿ ಭುಜಬಲಿ ಇವರು ಕಾರ್ಯಕ್ರಮದ ಅಧ್ಯಕ್ಷೀಯ ಶುಭ ನುಡಿಗಳಲ್ಲಿ ” ಆನೆ ” ಎಂಬ ಪದವನ್ನು ಈಗಲಿಂದಲೇ ನೆನಪಲ್ಲಿ ಉಳಿಸಿಕೊಳ್ಳಬೇಕು “ಆ” ಎಂದರೆ ಆರೋಗ್ಯ, “ನೆ” ಎಂದರೆ ನೆಮ್ಮದಿ ಎನ್ನುತ್ತಾ, ಓದಿನ ಮಹತ್ವವನ್ನು ತಿಳಿಸಿದರು.

ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರು ನವೀನ್ ಚಂದ್ರ ಶೆಟ್ಟಿ ಮುಖ್ಯ ಅಥಿತಿಗಳಾಗಿ ಮಕ್ಕಳಿಗೆ ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ.ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವಂದನಾರ್ಪಣೆಗೈದರು.

ಕಾರ್ಯಕ್ರಮದಲ್ಲಿ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಬೊಳ್ಮಾ, ಎಂ.ಬಿ.ಕೆ ಚಂದ್ರಾವತಿ, ಅಂಗನವಾಡಿ ಕಾರ್ಯಕರ್ತೆ ಸುಚಿತ್ರ, ಬಿಂದು, ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದ ಕಾರ್ಯದರ್ಶಿ ಅರುಣ ಪಾಲ್ಗೊಂಡಿದ್ದರು. ಗ್ರಂಥಾಲಯವೆಂಬ ಬೃಹದಾಕಾರವಾದ ಮರದ ಕಾಂಡಗಳಿಗೆ ಅತಿಥಿಗಳು, ಎಲೆಗಳಿಗೆ ಮಕ್ಕಳು ತಮ್ಮ ಸಹಿ ಹಾಕುವುದರ ಮೂಲಕ ಶಿಬಿರ ಪ್ರಾರಂಭಗೊಂಡಿತು. ಗ್ರಂಥಾಲಯ ಮೇಲ್ವಿಚಾರಕಿ ಮಂಜುಳ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ವತಿಯಿಂದ ಲಘು ಪಾನೀಯ ವ್ಯವಸ್ಥೆಯನ್ನು ಮಾಡಲಾಯಿತು.

Related posts

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya
error: Content is protected !!