August 4, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಧರ್ಮಸ್ಥಳ: “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ದ ಉದ್ಘಾಟನಾ ಸಮಾರಂಭ

ಧರ್ಮಸ್ಥಳ: ದಿನಾಂಕ: 05.05.2026ರಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ”ದ ಉದ್ಘಾಟನಾ ಸಮಾರಂಭವನ್ನು ಧರ್ಮಸ್ಥಳ ಮಂಡಲ ಪಂಚಾಯತ್ ನ ಮಾಜಿ ಪ್ರಧಾನರು, ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರೂ ಆದ ಸುಂದರ ಗೌಡ ಇವರು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿ ಅಂತರ್ಜಾಲಗಳಿಂದ ಮಕ್ಕಳನ್ನು ದೂರವಿರಿಸಲು ಇಂಥ ಶಿಬಿರಗಳು ಅತ್ಯಗತ್ಯ ಹಾಗೂ ಶಿಬಿರದ ಮಹತ್ವವನ್ನ ತಿಳಿಸಿದರು.

ಜಮಾ ಉಗ್ರಾಣದ ಹಿರಿಯ ಮುತ್ಸದಿ ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರೂ ಆದಂತಹ ಬಿ ಭುಜಬಲಿ ಇವರು ಕಾರ್ಯಕ್ರಮದ ಅಧ್ಯಕ್ಷೀಯ ಶುಭ ನುಡಿಗಳಲ್ಲಿ ” ಆನೆ ” ಎಂಬ ಪದವನ್ನು ಈಗಲಿಂದಲೇ ನೆನಪಲ್ಲಿ ಉಳಿಸಿಕೊಳ್ಳಬೇಕು “ಆ” ಎಂದರೆ ಆರೋಗ್ಯ, “ನೆ” ಎಂದರೆ ನೆಮ್ಮದಿ ಎನ್ನುತ್ತಾ, ಓದಿನ ಮಹತ್ವವನ್ನು ತಿಳಿಸಿದರು.

ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರು ನವೀನ್ ಚಂದ್ರ ಶೆಟ್ಟಿ ಮುಖ್ಯ ಅಥಿತಿಗಳಾಗಿ ಮಕ್ಕಳಿಗೆ ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ.ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವಂದನಾರ್ಪಣೆಗೈದರು.

ಕಾರ್ಯಕ್ರಮದಲ್ಲಿ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಬೊಳ್ಮಾ, ಎಂ.ಬಿ.ಕೆ ಚಂದ್ರಾವತಿ, ಅಂಗನವಾಡಿ ಕಾರ್ಯಕರ್ತೆ ಸುಚಿತ್ರ, ಬಿಂದು, ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದ ಕಾರ್ಯದರ್ಶಿ ಅರುಣ ಪಾಲ್ಗೊಂಡಿದ್ದರು. ಗ್ರಂಥಾಲಯವೆಂಬ ಬೃಹದಾಕಾರವಾದ ಮರದ ಕಾಂಡಗಳಿಗೆ ಅತಿಥಿಗಳು, ಎಲೆಗಳಿಗೆ ಮಕ್ಕಳು ತಮ್ಮ ಸಹಿ ಹಾಕುವುದರ ಮೂಲಕ ಶಿಬಿರ ಪ್ರಾರಂಭಗೊಂಡಿತು. ಗ್ರಂಥಾಲಯ ಮೇಲ್ವಿಚಾರಕಿ ಮಂಜುಳ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ವತಿಯಿಂದ ಲಘು ಪಾನೀಯ ವ್ಯವಸ್ಥೆಯನ್ನು ಮಾಡಲಾಯಿತು.

Related posts

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!