24.7 C
ಪುತ್ತೂರು, ಬೆಳ್ತಂಗಡಿ
May 5, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

ಬೆಳ್ತಂಗಡಿ : ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಪಕ್ಷದ ಕಚೇರಿ ಮುಂಭಾಗದಲ್ಲಿ ಸಿಡಿಮದ್ದು ಸಿಡಿಸಿ, ಜೈ ಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಲಾಯಿತು.

ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಮಾತನಾಡಿ ಪಂಚ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ, ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದನೆಯ 15 ವರ್ಷದ ಆಡಳಿತವನ್ನು ಮತದಾರರು ತಿರಸ್ಕಾರ ಮಾಡಿ ಭಾರತೀಯ ಜನತಾ ಪಾರ್ಟಿ ನರೇಂದ್ರ ಮೋದೀಜಿ ನಾಯಕತ್ವವನ್ನು ಮೆಚ್ಚಿ 200 ಸ್ಥಾನದಲ್ಲಿ ಅವಿಸ್ಮರಣೀಯ ಐತಿಹಾಸಿಕ ಗೆಲುವು ಸಾಧಸಿದೆ, ಅದೇ ರೀತಿ ಅಸ್ಸಾಂ,ಪುದುಚೇರಿ, ರಾಜ್ಯದಲ್ಲಿ ಬಿಜೆಪಿ ಬಹುಮತ ಆಡಳಿತ ಚುಕ್ಕಾಣಿ ಪಡೆದಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಧ್ಯೆಯವನ್ನು ಸ್ವೀಕರಿಸಿದ ಮತದಾರರು ನಾಯಕತ್ವ ವಿಶ್ವಕ್ಕೆ ಮಾದರಿಯಾಗಿದೆ, ಐದು ರಾಜ್ಯದಲ್ಲಿ 3 ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಸಾದ್ ಕುಮಾರ್, ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮನ್ ಕೀ ಬಾತ್ ಜಿಲ್ಲಾ ಪ್ರಭಾರಿ ಸೀತಾರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್,ಮಂಡಲ ಯುವಮೋರ್ಚಾ ಮೋರ್ಚಾ ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಕಾರ್ಯದರ್ಶಿ ಜಗದೀಶ್ ಕನ್ನಾಜೆ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ,ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್, ಗಿರೀಶ್ ಡೋಂಗ್ರೆ ಲಾಯಿಲ , ಸುಧಾಕರ್ ಬಿ. ಎಲ್,ವಿಠಲ್ ಗುರುವಾಯನಕೆರೆ, ಮಹೇಶ್,ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!