28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

ಬೆಳ್ತಂಗಡಿ: ಮನೆಯ ಗೋಡೆಯೊಂದರಲ್ಲಿ ಸಿಕ್ಕಿದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ರಕ್ಷಿಸಿ 16 ಮರಿಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

ನೆರಿಯ ಗ್ರಾಮದ ಗುಂಡಿಕಂಡ ಬೊಮ್ಮಣ್ಣ ಗೌಡ ಎಂಬವರ ಮನೆಯ ಗೋಡೆಯ ಒಳಗಡೆ ಕಳೆದ ಕೆಲವು ದಿನಗಳ ಹಿಂದೆ ನಾಗರಹಾವು ಕಂಡುಬಂದಿತ್ತು.ಇದನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲು ಸಮಾಜ ಸೇವಕ, ಉರಗ ಮಿತ್ರ ಕಕ್ಕಿಂಜೆಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಲಾಗಿತ್ತು.

ಗೋಡೆಯ ಒಳಗಡೆ ಇದ್ದ ನಾಗರಹಾವನ್ನು ಹಿಡಿದಾಗ ಸುಮಾರು 16 ಮೊಟ್ಟೆಗಳು ಪತ್ತೆಯಾಗಿದ್ದವು. ಈ ಮೊಟ್ಟೆಗಳಿಗೆ ಇರುವೆಗಳು ಮುತ್ತಿಕೊಂಡಿದ್ದು ಅವುಗಳ ಸ್ಥಿತಿ ಅಪಾಯಕಾರಿಯಾಗಿತ್ತು‌. ಇದನ್ನು ಗಮನಿಸಿ ಅವುಗಳನ್ನು ಗೋಡೆಯಿಂದ ಹೊರ ತೆಗೆದು ಅಗತ್ಯ ಆರೈಕೆ ನೀಡಿ ಕೃತಕ ಕಾವು ನೀಡುವ ಕೆಲಸವನ್ನು ಮಾಡಿದರು. ಇದೀಗ 16 ಮರಿಗಳು ಮೊಟ್ಟೆಯಿಂದ ಹೊರಬಂದಿವೆ. ಆರೋಗ್ಯವಾಗಿದ್ದ ಈ ನಾಗರಹಾವಿನ ಮರಿಗಳನ್ನು ಅರಣ್ಯ ಇಲಾಖೆಯ ಸಹಕಾರದಲ್ಲಿ ಚಾರ್ಮಾಡಿ ಘಾಟಿ ವಿಭಾಗದ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಕಳೆದ ತಿಂಗಳು ತೋಟತ್ತಾಡಿ ಗ್ರಾಮದಲ್ಲಿ ಪತ್ತೆಯಾಗಿದ್ದ 28 ನೀರು ಹಾವಿನ ಮೊಟ್ಟೆಗಳನ್ನು ರಕ್ಷಿಸಿ ಮರಿಗಳಿಗೆ ಜೀವದಾನ ನೀಡಲಾಗಿತ್ತು. ಇದೀಗ ನೆರಿಯದಲ್ಲಿ ಇರುವೆಗಳ ದಾಳಿಗೆ ಒಳಗಾಗಿದ್ದ ನಾಗರಹಾವಿನ ಮೊಟ್ಟೆಗಳನ್ನು ಸಂರಕ್ಷಿಸಿ, ಕೃತಕ ಕಾವು ನೀಡಿ ಮರಿಗಳನ್ನು ಅರಣ್ಯಕ್ಕೆ ಬಿಡಲಾಗಿದೆ.ಸ್ನೇಕ್ ಅನಿಲ್, ಉರಗ ಮಿತ್ರ ಕಕ್ಕಿಂಜೆ

Related posts

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!