ತಣ್ಣೀರುಪಂತ : ಮೇ 4ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪಂತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು,ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನೀಲ್ ಪಾಲೇದು, ರಾಜೇಶ್ ಕರಂಗೀಲು, ಹರೀಶ್ ಪ್ರಸಾದ್ ಬೋಲ್ಡೆಲ್, ಯತೀಶ್ ಪಾಲೇದು ಇನ್ನೂ ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.








