25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

ಮಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ಹಾಗೂ ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಉತ್ತಮ ಸಾಧನೆ ಮಾಡಿರುವುದು ಪ್ರಧಾನಮಂತ್ರಿ ಮೋದಿ ಅವರ ಸರ್ಕಾರದ ಮೇಲಿರುವ ಜನರ ವಿಶ್ವಾಸಕ್ಕೆ ಹಾಗೂ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವು ಇಡೀ ದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರಿಗೆ ಸಂದ ಗೆಲುವು. ಏಕೆಂದರೆ, ಪಶ್ಚಿಮ ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್‌ನ ಗೂಂಡಾ ರಾಜ್ಯದಲ್ಲಿ ಕಮಲವನ್ನು ಅರಳಿಸುವುದು ಅಷ್ಟೊಂದು ಸುಲಭವಿರಲಿಲ್ಲ. ಈ ಗೆಲುವಿನ ಹಿಂದೆ ಬಿಜೆಪಿಯ ಕಾರ್ಯಕರ್ತರ ತ್ಯಾಗ-ಬಲಿದಾನ ಅಡಗಿದೆ. ಬಿಜೆಪಿಯ ಕಾರ್ಯಕರ್ತರ ಮೇಲೆ ಸಾಕಷ್ಟು ದೌರ್ಜನ್ಯ ನಡೆದರೂ ಎದೆಗುಂದದೆ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಬಿಜೆಪಿ ಕಾರ್ಯಕರ್ತರ ಕಠಿಣ ಪರಿಶ್ರಮ, ಹೋರಾಟಕ್ಕೆ ಹಾಗೂ ಬಿಜೆಪಿ ಸೈದಾಂತಿಕ ನಿಲುವಿಗೆ ಸಿಕ್ಕ ಐತಿಹಾಸಿಕ ಜಯ ಇದು ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟಿದ್ದಾರೆ.

ಐದು ರಾಜ್ಯಗಳಲ್ಲಿನ ಬಿಜೆಪಿಯ ಅದ್ಭುತ ಸಾಧನೆಯ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಪ್ರತಿಮ ಕಾರ್ಯತಂತ್ರ ಹಾಗೂ ರಾಷ್ಟ್ರೀಯ ಏಕತೆಗೆ ಅವರ ಅಚಲ ಬದ್ಧತೆಯಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಚೈತನ್ಯದಾಯಕ ಸಂಘಟನಾ ಶಕ್ತಿಯು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿದ್ದು, ಬಂಗಾಳದಿಂದ ಪುದುಚೇರಿಯವರೆಗೆ ಬಿಜೆಪಿಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

ಒಟ್ಟಾರೆಯಾಗಿ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶವು ಎನ್‌ಡಿಎ ಮೈತ್ರಿಕೂಟದ ವಿಶ್ವಾಸಾರ್ಹತೆ ಹಾಗೂ ಪಾರದರ್ಶಕ ಆಡಳಿತದ ವಿಜಯವಾಗಿದೆ. ದೇಶಾದ್ಯಂತ ಬಿಜೆಪಿಯ ವ್ಯಾಪ್ತಿಯನ್ನು ಈ ಜಯವು ಮತ್ತಷ್ಟು ವಿಸ್ತರಿಸಿದ್ದು, ರಾಷ್ಟ್ರದ ಪ್ರಗತಿಯ ಹಾದಿಯಲ್ಲಿ ಜನರು ಮೋದಿಯವರ ನಾಯಕತ್ವವನ್ನು ಸಂಪೂರ್ಣವಾಗಿ ಕಾಯ-ವಾಚಾ-ಮನಸಾ ಒಪ್ಪಿಕೊಂಡಿರುವುದಕ್ಕೆ ಸಾಕ್ಷಿಯಿದು. ಈ ಐತಿಹಾಸಿಕ ಜನಾದೇಶ ನೀಡಿರುವ ಮತದಾರರಿಗೆ ಹಾಗೂ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಸಮರ್ಪಿತ ಬಿಜೆಪಿ ಕಾರ್ಯಕರ್ತರಿಗೆ ಕ್ಯಾ. ಬ್ರಿಜೇಶ್ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya
error: Content is protected !!