25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

ಬೆಳ್ತಂಗಡಿ: ಬಳಂಜ ಶ್ರೀ ಪಂಚಲಿಂಗೇಶ್ವರ -ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ದುಬೈಯಲ್ಲಿ ಸಾವಿರಾರು ಭಾರತೀಯರಿಗೆ ಉದ್ಯೋಗದಾತರಾಗಿದ್ದುಕೊಂಡು, ದುಬಾಯಿಯಂತಹ ಹೊರದೇಶದಲ್ಲಿ ತಮಿಳ್ ರೇಡಿಯೋವನ್ನು ಕಳೆದ ಒಂದು ದಶಕಗಳಿಂದ ನಡೆಸಿಕೊಂಡು ಬರುತ್ತಿದ್ದು ತಮಿಳುನಾಡಿನ ಶಿವಕಾಶಿ, ಮದುರೈ ಮೀನಾಕ್ಷಿ ದೇವಸ್ಥಾನ ಸೇರಿದಂತೆ ಅನೇಕ ಧಾರ್ಮಿಕ ಸಂಸ್ಥೆಗಳಿಗೆ ಪೋಷಕರಾಗಿರುವ ಡಾ.ಸೋನಾ ರಾಮ್ ಮತ್ತು ಶಕ್ತಿ ರಾಮ್ ರವರು ತಮ್ಮ ಭಕ್ತಾದಿಗಳ ತಂಡದೊಂದಿಗೆ ಬಳಂಜ ದೇವಸ್ಥಾನಕ್ಕೆ ಸೋಮವಾರ ಸುಮಾರು 50 ಜನರ ತಂಡದೊಂದಿಗೆ ಆಗಮಿಸಿ ಸತ್ಸಂಗ ನೆರವೇರಿಸಿದರು.

ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ, ಪ್ರಮುಖರಾದ ಗುರುಪ್ರಸಾದ್ ಹೆಗ್ಡೆ, ಪ್ರಭಾಕರ ಹೆಗ್ಡೆ ಕೋಡಿ, ಚಂದ್ರಶೇಖರ ಪಿ.ಕೆ, ದಿನೇಶ್ ಪಿ.ಕೆ, ಜಗದೀಶ್ ರೈ, ವಿನು ಬಳಂಜ, ಸಂತೋಷ್ ಸಾಲಿಯಾನ್ ಕಾಪಿನಡ್ಕ, ಚಿತ್ತರಂಜನ್ ಹೆಗ್ಡೆ, ರತ್ನರಾಜ್ ಜೈನ್ ಪೇರಂದಬೈಲ್, ಗಣೇಶ್ ಬಿ ಬೊಂಟ್ರೊಟ್ಟು, ಸದಾನಂದ ಪೂಜಾರಿ ಬೊಂಟ್ರೊಟ್ಟು, ಮನೋಹರ್ ಬಳಂಜ, ಸುನಂದ ಕುಳೆಂಜಿರೋಡಿ ಗುತ್ತು, ಸತೀಶ್ ಶೆಟ್ಟಿ ಕುರೆಲ್ಯ, ಅರ್ಚಕರಾದ ಸುರೇಶ್ ಭಟ್, ಮಂಜುನಾಥ್ ಭಟ್, ವಿಕ್ರಮ್ ಭಟ್, ಮತ್ತು ಊರವರು ಸ್ವಾಗತಿಸಿದರು.

ಕ್ಷೇತ್ರದ ವತಿಯಿಂದ ಭಜನಾ ತಂಡವನ್ನು ಗೌರವಿಸಲಾಯಿತು. ಉದ್ಯಮಿ ಅಶ್ವಥ್ ಹೆಗ್ಡೆ ಇದರ ನೇತೃತ್ವ ವಹಿಸಿದ್ದರು.

Related posts

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!