31.7 C
ಪುತ್ತೂರು, ಬೆಳ್ತಂಗಡಿ
June 20, 2026
ಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಬೈಲಾಂಜನೇಯ ಸ್ವಾಮಿ ವಿದ್ಯಾಸಂಸ್ಥೆ ಬೈರ ಶೆಟ್ಟಿ ಹಳ್ಳಿ ನೆಲಮಂಗಲ ಬೆಂಗಳೂರು ಇಲ್ಲಿನ ವಿದ್ಯಾರ್ಥಿಗಳಿಗೆ ಮೇ 3ರಂದು ಬೈಲಾಂಜನೇಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಮಸ್ವಾಮಿ ಇವರ ನೇತೃತ್ವದಲ್ಲಿ ವಿಶೇಷವಾಗಿ ಬೆಂಗಳೂರಿನ ನೆಲಮಂಗಲದಲ್ಲಿ ಕುಣಿತ ಭಜನಾ ಮಂಡಳಿ ಉದ್ಘಾಟನೆಗೊಳಿಸಿದರು.

ದೇವರನ್ನು ಅತೀ ಸುಲಭದಲ್ಲಿ ಒಲಿಸುವುದಿದ್ದರೆ ಅದು ಭಜನೆಯಿಂದ ಮಾತ್ರ ಸಾಧ್ಯ ಮಕ್ಕಳಲ್ಕಿ ಧಾರ್ಮಿಕತೆಯ ದೃಷ್ಟಿಯಲ್ಲಿ ಉತ್ತಮ ಸಂಸ್ಕಾರಗಳು ಬೆಳೆಯಬೇಕು ಮತ್ತು ಈಗಿನ ಯುವಪೀಳಿಗೆಯಲ್ಲಿ ಮೊಬೈಲ್ ಜಾಲಾತಾಣದಿಂದ ದೂರ ಸರಿದು ದೇವರ ಸಂಕೀರ್ತನೆಯಲ್ಲಿ ತನ್ನನು ತಾನು ತೊಡಗಿಸಿಕೊಂಡಲ್ಲಿ ಉತ್ತಮ ಇಂತಹ ಭಜನೆ ಈಗಿನ ದಿನಗಳಲ್ಲಿ ಈ‌ಭಾಗಕ್ಕೆ ಅವಶ್ಯಕತೆ ಇದೆ ಎಂದು ರಾಮಸ್ವಾಮಿ ಇವರು ತಿಳಿಸಿದರು.

ಈ‌ ತರಬೇತಿ ಶಿಬಿರದಲ್ಲಿ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕುಣಿತ ಭಜನಾ ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಹಾಗೂ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಮತ್ತು ಆಂಜನ್ ಮೂರ್ತಿ ಮುಖ್ಯ ಶಿಕ್ಷಕರು ಹಾಗೂ‌ ಹೆಚ್.ಕೆ.ರಮೇಶ್ ಟ್ರಸ್ಟಿಗಳು ,ತರಬೇತುದಾರರಾದ ಆಕಾಶ್, ಚರಣ್,ಸೃಜನ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!