25.1 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಬೈಲಾಂಜನೇಯ ಸ್ವಾಮಿ ವಿದ್ಯಾಸಂಸ್ಥೆ ಬೈರ ಶೆಟ್ಟಿ ಹಳ್ಳಿ ನೆಲಮಂಗಲ ಬೆಂಗಳೂರು ಇಲ್ಲಿನ ವಿದ್ಯಾರ್ಥಿಗಳಿಗೆ ಮೇ 3ರಂದು ಬೈಲಾಂಜನೇಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಮಸ್ವಾಮಿ ಇವರ ನೇತೃತ್ವದಲ್ಲಿ ವಿಶೇಷವಾಗಿ ಬೆಂಗಳೂರಿನ ನೆಲಮಂಗಲದಲ್ಲಿ ಕುಣಿತ ಭಜನಾ ಮಂಡಳಿ ಉದ್ಘಾಟನೆಗೊಳಿಸಿದರು.

ದೇವರನ್ನು ಅತೀ ಸುಲಭದಲ್ಲಿ ಒಲಿಸುವುದಿದ್ದರೆ ಅದು ಭಜನೆಯಿಂದ ಮಾತ್ರ ಸಾಧ್ಯ ಮಕ್ಕಳಲ್ಕಿ ಧಾರ್ಮಿಕತೆಯ ದೃಷ್ಟಿಯಲ್ಲಿ ಉತ್ತಮ ಸಂಸ್ಕಾರಗಳು ಬೆಳೆಯಬೇಕು ಮತ್ತು ಈಗಿನ ಯುವಪೀಳಿಗೆಯಲ್ಲಿ ಮೊಬೈಲ್ ಜಾಲಾತಾಣದಿಂದ ದೂರ ಸರಿದು ದೇವರ ಸಂಕೀರ್ತನೆಯಲ್ಲಿ ತನ್ನನು ತಾನು ತೊಡಗಿಸಿಕೊಂಡಲ್ಲಿ ಉತ್ತಮ ಇಂತಹ ಭಜನೆ ಈಗಿನ ದಿನಗಳಲ್ಲಿ ಈ‌ಭಾಗಕ್ಕೆ ಅವಶ್ಯಕತೆ ಇದೆ ಎಂದು ರಾಮಸ್ವಾಮಿ ಇವರು ತಿಳಿಸಿದರು.

ಈ‌ ತರಬೇತಿ ಶಿಬಿರದಲ್ಲಿ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕುಣಿತ ಭಜನಾ ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಹಾಗೂ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಮತ್ತು ಆಂಜನ್ ಮೂರ್ತಿ ಮುಖ್ಯ ಶಿಕ್ಷಕರು ಹಾಗೂ‌ ಹೆಚ್.ಕೆ.ರಮೇಶ್ ಟ್ರಸ್ಟಿಗಳು ,ತರಬೇತುದಾರರಾದ ಆಕಾಶ್, ಚರಣ್,ಸೃಜನ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya
error: Content is protected !!