26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

ಬೆಳ್ತಂಗಡಿ: ಮನೆಯ ಗೋಡೆಯೊಂದರಲ್ಲಿ ಸಿಕ್ಕಿದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ರಕ್ಷಿಸಿ 16 ಮರಿಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

ನೆರಿಯ ಗ್ರಾಮದ ಗುಂಡಿಕಂಡ ಬೊಮ್ಮಣ್ಣ ಗೌಡ ಎಂಬವರ ಮನೆಯ ಗೋಡೆಯ ಒಳಗಡೆ ಕಳೆದ ಕೆಲವು ದಿನಗಳ ಹಿಂದೆ ನಾಗರಹಾವು ಕಂಡುಬಂದಿತ್ತು.ಇದನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲು ಸಮಾಜ ಸೇವಕ, ಉರಗ ಮಿತ್ರ ಕಕ್ಕಿಂಜೆಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಲಾಗಿತ್ತು.

ಗೋಡೆಯ ಒಳಗಡೆ ಇದ್ದ ನಾಗರಹಾವನ್ನು ಹಿಡಿದಾಗ ಸುಮಾರು 16 ಮೊಟ್ಟೆಗಳು ಪತ್ತೆಯಾಗಿದ್ದವು. ಈ ಮೊಟ್ಟೆಗಳಿಗೆ ಇರುವೆಗಳು ಮುತ್ತಿಕೊಂಡಿದ್ದು ಅವುಗಳ ಸ್ಥಿತಿ ಅಪಾಯಕಾರಿಯಾಗಿತ್ತು‌. ಇದನ್ನು ಗಮನಿಸಿ ಅವುಗಳನ್ನು ಗೋಡೆಯಿಂದ ಹೊರ ತೆಗೆದು ಅಗತ್ಯ ಆರೈಕೆ ನೀಡಿ ಕೃತಕ ಕಾವು ನೀಡುವ ಕೆಲಸವನ್ನು ಮಾಡಿದರು. ಇದೀಗ 16 ಮರಿಗಳು ಮೊಟ್ಟೆಯಿಂದ ಹೊರಬಂದಿವೆ. ಆರೋಗ್ಯವಾಗಿದ್ದ ಈ ನಾಗರಹಾವಿನ ಮರಿಗಳನ್ನು ಅರಣ್ಯ ಇಲಾಖೆಯ ಸಹಕಾರದಲ್ಲಿ ಚಾರ್ಮಾಡಿ ಘಾಟಿ ವಿಭಾಗದ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಕಳೆದ ತಿಂಗಳು ತೋಟತ್ತಾಡಿ ಗ್ರಾಮದಲ್ಲಿ ಪತ್ತೆಯಾಗಿದ್ದ 28 ನೀರು ಹಾವಿನ ಮೊಟ್ಟೆಗಳನ್ನು ರಕ್ಷಿಸಿ ಮರಿಗಳಿಗೆ ಜೀವದಾನ ನೀಡಲಾಗಿತ್ತು. ಇದೀಗ ನೆರಿಯದಲ್ಲಿ ಇರುವೆಗಳ ದಾಳಿಗೆ ಒಳಗಾಗಿದ್ದ ನಾಗರಹಾವಿನ ಮೊಟ್ಟೆಗಳನ್ನು ಸಂರಕ್ಷಿಸಿ, ಕೃತಕ ಕಾವು ನೀಡಿ ಮರಿಗಳನ್ನು ಅರಣ್ಯಕ್ಕೆ ಬಿಡಲಾಗಿದೆ.ಸ್ನೇಕ್ ಅನಿಲ್, ಉರಗ ಮಿತ್ರ ಕಕ್ಕಿಂಜೆ

Related posts

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!