28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

ಬೆಳ್ತಂಗಡಿ: ಮನೆಯ ಗೋಡೆಯೊಂದರಲ್ಲಿ ಸಿಕ್ಕಿದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ರಕ್ಷಿಸಿ 16 ಮರಿಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

ನೆರಿಯ ಗ್ರಾಮದ ಗುಂಡಿಕಂಡ ಬೊಮ್ಮಣ್ಣ ಗೌಡ ಎಂಬವರ ಮನೆಯ ಗೋಡೆಯ ಒಳಗಡೆ ಕಳೆದ ಕೆಲವು ದಿನಗಳ ಹಿಂದೆ ನಾಗರಹಾವು ಕಂಡುಬಂದಿತ್ತು.ಇದನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲು ಸಮಾಜ ಸೇವಕ, ಉರಗ ಮಿತ್ರ ಕಕ್ಕಿಂಜೆಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಲಾಗಿತ್ತು.

ಗೋಡೆಯ ಒಳಗಡೆ ಇದ್ದ ನಾಗರಹಾವನ್ನು ಹಿಡಿದಾಗ ಸುಮಾರು 16 ಮೊಟ್ಟೆಗಳು ಪತ್ತೆಯಾಗಿದ್ದವು. ಈ ಮೊಟ್ಟೆಗಳಿಗೆ ಇರುವೆಗಳು ಮುತ್ತಿಕೊಂಡಿದ್ದು ಅವುಗಳ ಸ್ಥಿತಿ ಅಪಾಯಕಾರಿಯಾಗಿತ್ತು‌. ಇದನ್ನು ಗಮನಿಸಿ ಅವುಗಳನ್ನು ಗೋಡೆಯಿಂದ ಹೊರ ತೆಗೆದು ಅಗತ್ಯ ಆರೈಕೆ ನೀಡಿ ಕೃತಕ ಕಾವು ನೀಡುವ ಕೆಲಸವನ್ನು ಮಾಡಿದರು. ಇದೀಗ 16 ಮರಿಗಳು ಮೊಟ್ಟೆಯಿಂದ ಹೊರಬಂದಿವೆ. ಆರೋಗ್ಯವಾಗಿದ್ದ ಈ ನಾಗರಹಾವಿನ ಮರಿಗಳನ್ನು ಅರಣ್ಯ ಇಲಾಖೆಯ ಸಹಕಾರದಲ್ಲಿ ಚಾರ್ಮಾಡಿ ಘಾಟಿ ವಿಭಾಗದ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಕಳೆದ ತಿಂಗಳು ತೋಟತ್ತಾಡಿ ಗ್ರಾಮದಲ್ಲಿ ಪತ್ತೆಯಾಗಿದ್ದ 28 ನೀರು ಹಾವಿನ ಮೊಟ್ಟೆಗಳನ್ನು ರಕ್ಷಿಸಿ ಮರಿಗಳಿಗೆ ಜೀವದಾನ ನೀಡಲಾಗಿತ್ತು. ಇದೀಗ ನೆರಿಯದಲ್ಲಿ ಇರುವೆಗಳ ದಾಳಿಗೆ ಒಳಗಾಗಿದ್ದ ನಾಗರಹಾವಿನ ಮೊಟ್ಟೆಗಳನ್ನು ಸಂರಕ್ಷಿಸಿ, ಕೃತಕ ಕಾವು ನೀಡಿ ಮರಿಗಳನ್ನು ಅರಣ್ಯಕ್ಕೆ ಬಿಡಲಾಗಿದೆ.ಸ್ನೇಕ್ ಅನಿಲ್, ಉರಗ ಮಿತ್ರ ಕಕ್ಕಿಂಜೆ

Related posts

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!