28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

ಬೆಳ್ತಂಗಡಿ: ಮನೆಯ ಗೋಡೆಯೊಂದರಲ್ಲಿ ಸಿಕ್ಕಿದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ರಕ್ಷಿಸಿ 16 ಮರಿಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

ನೆರಿಯ ಗ್ರಾಮದ ಗುಂಡಿಕಂಡ ಬೊಮ್ಮಣ್ಣ ಗೌಡ ಎಂಬವರ ಮನೆಯ ಗೋಡೆಯ ಒಳಗಡೆ ಕಳೆದ ಕೆಲವು ದಿನಗಳ ಹಿಂದೆ ನಾಗರಹಾವು ಕಂಡುಬಂದಿತ್ತು.ಇದನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲು ಸಮಾಜ ಸೇವಕ, ಉರಗ ಮಿತ್ರ ಕಕ್ಕಿಂಜೆಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಲಾಗಿತ್ತು.

ಗೋಡೆಯ ಒಳಗಡೆ ಇದ್ದ ನಾಗರಹಾವನ್ನು ಹಿಡಿದಾಗ ಸುಮಾರು 16 ಮೊಟ್ಟೆಗಳು ಪತ್ತೆಯಾಗಿದ್ದವು. ಈ ಮೊಟ್ಟೆಗಳಿಗೆ ಇರುವೆಗಳು ಮುತ್ತಿಕೊಂಡಿದ್ದು ಅವುಗಳ ಸ್ಥಿತಿ ಅಪಾಯಕಾರಿಯಾಗಿತ್ತು‌. ಇದನ್ನು ಗಮನಿಸಿ ಅವುಗಳನ್ನು ಗೋಡೆಯಿಂದ ಹೊರ ತೆಗೆದು ಅಗತ್ಯ ಆರೈಕೆ ನೀಡಿ ಕೃತಕ ಕಾವು ನೀಡುವ ಕೆಲಸವನ್ನು ಮಾಡಿದರು. ಇದೀಗ 16 ಮರಿಗಳು ಮೊಟ್ಟೆಯಿಂದ ಹೊರಬಂದಿವೆ. ಆರೋಗ್ಯವಾಗಿದ್ದ ಈ ನಾಗರಹಾವಿನ ಮರಿಗಳನ್ನು ಅರಣ್ಯ ಇಲಾಖೆಯ ಸಹಕಾರದಲ್ಲಿ ಚಾರ್ಮಾಡಿ ಘಾಟಿ ವಿಭಾಗದ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಕಳೆದ ತಿಂಗಳು ತೋಟತ್ತಾಡಿ ಗ್ರಾಮದಲ್ಲಿ ಪತ್ತೆಯಾಗಿದ್ದ 28 ನೀರು ಹಾವಿನ ಮೊಟ್ಟೆಗಳನ್ನು ರಕ್ಷಿಸಿ ಮರಿಗಳಿಗೆ ಜೀವದಾನ ನೀಡಲಾಗಿತ್ತು. ಇದೀಗ ನೆರಿಯದಲ್ಲಿ ಇರುವೆಗಳ ದಾಳಿಗೆ ಒಳಗಾಗಿದ್ದ ನಾಗರಹಾವಿನ ಮೊಟ್ಟೆಗಳನ್ನು ಸಂರಕ್ಷಿಸಿ, ಕೃತಕ ಕಾವು ನೀಡಿ ಮರಿಗಳನ್ನು ಅರಣ್ಯಕ್ಕೆ ಬಿಡಲಾಗಿದೆ.ಸ್ನೇಕ್ ಅನಿಲ್, ಉರಗ ಮಿತ್ರ ಕಕ್ಕಿಂಜೆ

Related posts

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಪಡ್ಲಾಡಿ 35ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!