May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

ಬೆಳ್ತಂಗಡಿ: ಮನೆಯ ಗೋಡೆಯೊಂದರಲ್ಲಿ ಸಿಕ್ಕಿದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ರಕ್ಷಿಸಿ 16 ಮರಿಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

ನೆರಿಯ ಗ್ರಾಮದ ಗುಂಡಿಕಂಡ ಬೊಮ್ಮಣ್ಣ ಗೌಡ ಎಂಬವರ ಮನೆಯ ಗೋಡೆಯ ಒಳಗಡೆ ಕಳೆದ ಕೆಲವು ದಿನಗಳ ಹಿಂದೆ ನಾಗರಹಾವು ಕಂಡುಬಂದಿತ್ತು.ಇದನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲು ಸಮಾಜ ಸೇವಕ, ಉರಗ ಮಿತ್ರ ಕಕ್ಕಿಂಜೆಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಲಾಗಿತ್ತು.

ಗೋಡೆಯ ಒಳಗಡೆ ಇದ್ದ ನಾಗರಹಾವನ್ನು ಹಿಡಿದಾಗ ಸುಮಾರು 16 ಮೊಟ್ಟೆಗಳು ಪತ್ತೆಯಾಗಿದ್ದವು. ಈ ಮೊಟ್ಟೆಗಳಿಗೆ ಇರುವೆಗಳು ಮುತ್ತಿಕೊಂಡಿದ್ದು ಅವುಗಳ ಸ್ಥಿತಿ ಅಪಾಯಕಾರಿಯಾಗಿತ್ತು‌. ಇದನ್ನು ಗಮನಿಸಿ ಅವುಗಳನ್ನು ಗೋಡೆಯಿಂದ ಹೊರ ತೆಗೆದು ಅಗತ್ಯ ಆರೈಕೆ ನೀಡಿ ಕೃತಕ ಕಾವು ನೀಡುವ ಕೆಲಸವನ್ನು ಮಾಡಿದರು. ಇದೀಗ 16 ಮರಿಗಳು ಮೊಟ್ಟೆಯಿಂದ ಹೊರಬಂದಿವೆ. ಆರೋಗ್ಯವಾಗಿದ್ದ ಈ ನಾಗರಹಾವಿನ ಮರಿಗಳನ್ನು ಅರಣ್ಯ ಇಲಾಖೆಯ ಸಹಕಾರದಲ್ಲಿ ಚಾರ್ಮಾಡಿ ಘಾಟಿ ವಿಭಾಗದ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಕಳೆದ ತಿಂಗಳು ತೋಟತ್ತಾಡಿ ಗ್ರಾಮದಲ್ಲಿ ಪತ್ತೆಯಾಗಿದ್ದ 28 ನೀರು ಹಾವಿನ ಮೊಟ್ಟೆಗಳನ್ನು ರಕ್ಷಿಸಿ ಮರಿಗಳಿಗೆ ಜೀವದಾನ ನೀಡಲಾಗಿತ್ತು. ಇದೀಗ ನೆರಿಯದಲ್ಲಿ ಇರುವೆಗಳ ದಾಳಿಗೆ ಒಳಗಾಗಿದ್ದ ನಾಗರಹಾವಿನ ಮೊಟ್ಟೆಗಳನ್ನು ಸಂರಕ್ಷಿಸಿ, ಕೃತಕ ಕಾವು ನೀಡಿ ಮರಿಗಳನ್ನು ಅರಣ್ಯಕ್ಕೆ ಬಿಡಲಾಗಿದೆ.ಸ್ನೇಕ್ ಅನಿಲ್, ಉರಗ ಮಿತ್ರ ಕಕ್ಕಿಂಜೆ

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!