31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

ಬೆಳ್ತಂಗಡಿ: ಬಳಂಜ ಶ್ರೀ ಪಂಚಲಿಂಗೇಶ್ವರ -ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ದುಬೈಯಲ್ಲಿ ಸಾವಿರಾರು ಭಾರತೀಯರಿಗೆ ಉದ್ಯೋಗದಾತರಾಗಿದ್ದುಕೊಂಡು, ದುಬಾಯಿಯಂತಹ ಹೊರದೇಶದಲ್ಲಿ ತಮಿಳ್ ರೇಡಿಯೋವನ್ನು ಕಳೆದ ಒಂದು ದಶಕಗಳಿಂದ ನಡೆಸಿಕೊಂಡು ಬರುತ್ತಿದ್ದು ತಮಿಳುನಾಡಿನ ಶಿವಕಾಶಿ, ಮದುರೈ ಮೀನಾಕ್ಷಿ ದೇವಸ್ಥಾನ ಸೇರಿದಂತೆ ಅನೇಕ ಧಾರ್ಮಿಕ ಸಂಸ್ಥೆಗಳಿಗೆ ಪೋಷಕರಾಗಿರುವ ಡಾ.ಸೋನಾ ರಾಮ್ ಮತ್ತು ಶಕ್ತಿ ರಾಮ್ ರವರು ತಮ್ಮ ಭಕ್ತಾದಿಗಳ ತಂಡದೊಂದಿಗೆ ಬಳಂಜ ದೇವಸ್ಥಾನಕ್ಕೆ ಸೋಮವಾರ ಸುಮಾರು 50 ಜನರ ತಂಡದೊಂದಿಗೆ ಆಗಮಿಸಿ ಸತ್ಸಂಗ ನೆರವೇರಿಸಿದರು.

ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ, ಪ್ರಮುಖರಾದ ಗುರುಪ್ರಸಾದ್ ಹೆಗ್ಡೆ, ಪ್ರಭಾಕರ ಹೆಗ್ಡೆ ಕೋಡಿ, ಚಂದ್ರಶೇಖರ ಪಿ.ಕೆ, ದಿನೇಶ್ ಪಿ.ಕೆ, ಜಗದೀಶ್ ರೈ, ವಿನು ಬಳಂಜ, ಸಂತೋಷ್ ಸಾಲಿಯಾನ್ ಕಾಪಿನಡ್ಕ, ಚಿತ್ತರಂಜನ್ ಹೆಗ್ಡೆ, ರತ್ನರಾಜ್ ಜೈನ್ ಪೇರಂದಬೈಲ್, ಗಣೇಶ್ ಬಿ ಬೊಂಟ್ರೊಟ್ಟು, ಸದಾನಂದ ಪೂಜಾರಿ ಬೊಂಟ್ರೊಟ್ಟು, ಮನೋಹರ್ ಬಳಂಜ, ಸುನಂದ ಕುಳೆಂಜಿರೋಡಿ ಗುತ್ತು, ಸತೀಶ್ ಶೆಟ್ಟಿ ಕುರೆಲ್ಯ, ಅರ್ಚಕರಾದ ಸುರೇಶ್ ಭಟ್, ಮಂಜುನಾಥ್ ಭಟ್, ವಿಕ್ರಮ್ ಭಟ್, ಮತ್ತು ಊರವರು ಸ್ವಾಗತಿಸಿದರು.

ಕ್ಷೇತ್ರದ ವತಿಯಿಂದ ಭಜನಾ ತಂಡವನ್ನು ಗೌರವಿಸಲಾಯಿತು. ಉದ್ಯಮಿ ಅಶ್ವಥ್ ಹೆಗ್ಡೆ ಇದರ ನೇತೃತ್ವ ವಹಿಸಿದ್ದರು.

Related posts

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya
error: Content is protected !!