May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

ಉಜಿರೆ: ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಶನಕ್ಕೆ ಬಂದ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಪಡೆಯಲು ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಸೇಲಂ ಇಲ್ಲಿನ ದಿನೇಶ್ ಬಾಲಸುಬ್ರಹ್ಮಣ್ಯ ಇವರು ಈ ಆಸ್ಪತ್ರೆಯ ಅತ್ಯುತ್ತಮ ವೈದ್ಯಕೀಯ ಸೇವೆ ಮತ್ತು ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಸ್ಪತ್ರೆಯ ಸೇವೆಯಿಂದ ತೃಪ್ತರಾದ ಇವರು ಆಸ್ಪತ್ರೆಗೆ ೫.೮೫ ಲಕ್ಷ ರೂಪಾಯಿ ಮೌಲ್ಯದ ಬ್ರೋಂಕೊಸ್ಕೋಪಿ ಯಂತ್ರವನ್ನು ಕೊಡುಗೆಯಾಗಿ ನೀಡಿದರು.


ದಿನೇಶ್ ಬಾಲಸುಬ್ರಹ್ಮಣ್ಯ ಇವರು ಮೇ. ೫ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಈ ಯಂತ್ರವನ್ನು ಹಸ್ತಾಂತರಿಸಿದರು. ಹೆಗ್ಗಡೆಯವರು ಇವರ ಕೊಡುಗೆಯನ್ನು ಸ್ವೀಕರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಬಾಲಸುಬ್ರಹ್ಮಣ್ಯ ಇವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸೇವೆ ನನಗೆ ಅತ್ಯಂತ ತೃಪ್ತಿ ನೀಡಿದ್ದು, ಆ ದಿನವೇ ಈ ಆಸ್ಪತ್ರೆಗೆ ಏನಾದರೂ ಕೊಡುಗೆ ನೀಡಬೇಕೆಂದು ನಿರ್ಧರಿಸಿ ಇಲ್ಲಿನ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಇವರಲ್ಲಿ ತಿಳಿಸಿದ್ದೆ. ಪ್ರತಿ ವರ್ಷ ಪೂಜ್ಯರು ಈ ಆಸ್ಪತ್ರೆಯಲ್ಲಿ ೫ ಕೋಟಿಗೂ ಅಧಿಕ ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡುತ್ತಿದ್ದು, ಇದರಲ್ಲಿ ಸರಿಸುಮಾರು ೧.೫ ಕೋಟಿ ರೂಪಾಯಿಯನ್ನು ಉಚಿತ ಡಯಾಲಿಸಿಸ್ ಸೇವೆಗಾಗಿ ವಿನಿಯೋಗಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದರು. ಯಾವುದೇ ಕೊಡುಗೆ ಬೇಡ ನಿಮ್ಮಂತವರ ಮೆಚ್ಚುಗೆಯ ನುಡಿ ಮತ್ತು ಸಂತೃಪ್ತಿಯೇ ನಮಗೆ ಸ್ಫೂರ್ತಿ ಎಂದು ಅವರು ಹೇಳಿದ್ದರೂ ನನ್ನ ಮನಸ್ಸಿನಲ್ಲಿ ಆಸ್ಪತ್ರೆಗೆ ಉಪಯೋಗವಾಗುವ ಬ್ರೋಂಕೊಸ್ಕೋಪಿ ಯಂತ್ರವನ್ನು ಕೊಡುಗೆಯಾಗಿ ನೀಡಲೇಬೇಕು ಎಂದು ಬಯಸಿದ್ದೆ. ಪೂಜ್ಯರ ಮಾರ್ಗದರ್ಶನದಲ್ಲಿ ನಡೆಯುವ ಎಲ್ಲಾ ಸಂಸ್ಥೆಗಳು ಜನಪರ ಕಾರ್ಯ ಮಾಡುತ್ತಿದ್ದು, ಈ ಆಸ್ಪತ್ರೆಯ ವೈದ್ಯಕೀಯ ಸೇವೆ ಅತ್ಯಂತ ಉತ್ತಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು, ಶ್ರದ್ಧಾ ಅಮಿತ್‌ಕುಮಾರ್, ಶುÈತ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ದಿನೇಶ್ ಬಾಲಸುಬ್ರಹ್ಮಣ್ಯ ಸಹೋದರ ಸುಸಿನ್ ಜೆ ದಂಪತಿಗಳು, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪರ್ಚೇಸ್ ಮೆನೇಜರ್ ಅಜಯ್ ಕುಮಾರ್ ಪಿ.ಕೆ, ಮಾರ್ಕೆಟಿಂಗ್ ಎಕ್ಷ್ಕ್ಯೂಟಿವ್ ಸುಮಂತ್ ರೈ ಉಪಸ್ಥಿತರಿದ್ದರು.

Related posts

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya
error: Content is protected !!