May 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.

11 ವರ್ಷದ ನಿಷ್ಕ್ ಅವರು ಏಪ್ರಿಲ್ 20ರಿಂದ 29ರವರೆಗೆ ಡೆಹ್ರಾಡೂನ್‌ನಲ್ಲಿ ನಡೆದ 10 ದಿನಗಳ ಐಸ್ ಹಾಕಿ ರಾಜ್ಯ ಶಿಬಿರದಲ್ಲಿ ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಜೂನ್ ತಿಂಗಳ ಕೊನೆಯ ವಾರದಲ್ಲಿ ಡೆಹ್ರಾಡೂನ್‌ನಲ್ಲೇ ನಡೆಯಲಿರುವ ರಾಷ್ಟ್ರೀಯ ಐಸ್ ಹಾಕಿ ಟೂರ್ನಿಯಲ್ಲಿ 14 ವರ್ಷದೊಳಗಿನವರ ಕರ್ನಾಟಕ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ.

ಪ್ರಸ್ತುತ ಬೆಂಗಳೂರಿನ ಅಕ್ಷಯನಗರದಲ್ಲಿ ವಾಸವಾಗಿರುವ ನಿಷ್ಕ್ ಅವರು ಎಲೆಕ್ಟ್ರಾನಿಕ್ ಸಿಟಿಯ ಡೆಲ್ಲಿ ಪಬ್ಲಿಕ್ ಸ್ಕೂಲ್‌ನಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ಕೇಟಿಂಗ್ ಕೋಚ್ ಶೈಖ್ ಅಬ್ದುಲ್ ಮತ್ತು ಇನ್‌ಲೈನ್ ಹಾಕಿ ಕೋಚ್ ಅಶ್ವಿನ್ ಅವರ ಮಾರ್ಗದರ್ಶನದಲ್ಲಿ ಅವರು ತರಬೇತಿ ಪಡೆದಿದ್ದಾರೆ.

ನಿಷ್ಕ್ ಅವರ ಈ ಸಾಧನೆ ಕುತ್ಲೂರು ಗ್ರಾಮಕ್ಕೆ ಹೆಮ್ಮೆ ತಂದುಕೊಟ್ಟಿದೆ. ಅವರು ಪ್ರಗತಿಪರ ಕೃಷಿಕ ಸಮೃದ್ಧಿ ಡಾಕಯ್ಯ ಪೂಜಾರಿ ಅವರ ಮೊಮ್ಮಗನಾಗಿದ್ದಾರೆ.

Related posts

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!