26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ 6) ಚಾಲನೆ ನೀಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿರುವ ಸಮಿತಿ, ಭಕ್ತರಿಗೆ ಉತ್ತಮ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಆರಂಭಿಸಿದೆ. ಪೂರ್ವ ಅಂಗಣದ ಛಾವಣಿ ನಿರ್ಮಾಣದಿಂದ ಮಳೆ ಹಾಗೂ ಬಿಸಿಲಿನ ತೊಂದರೆ ನಿವಾರಣೆಯಾಗಲಿದ್ದು, ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿ ಸದಸ್ಯರು, ಮೊಂಟೆತ್ತಡ್ಕ ಸಮಿತಿಯ ಅಧ್ಯಕ್ಷ ಜಿನ್ನಪ್ಪ ಗೌಡ ಮೊಂಟೆತ್ತಡ್ಕ ಮತ್ತು ಸದಸ್ಯರು, ದೀಪಕಾನಂದ, ಪುರುಷೋತ್ತಮ ಕುರುಂಬು, ಮೋನಪ್ಪ ಗೌಡ, ಚೆನ್ನಪ್ಪ ಹೆಚ್.ಎಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಂದ ಸಹಕಾರ ದೊರೆಯಲಿ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!