25.1 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.

11 ವರ್ಷದ ನಿಷ್ಕ್ ಅವರು ಏಪ್ರಿಲ್ 20ರಿಂದ 29ರವರೆಗೆ ಡೆಹ್ರಾಡೂನ್‌ನಲ್ಲಿ ನಡೆದ 10 ದಿನಗಳ ಐಸ್ ಹಾಕಿ ರಾಜ್ಯ ಶಿಬಿರದಲ್ಲಿ ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಜೂನ್ ತಿಂಗಳ ಕೊನೆಯ ವಾರದಲ್ಲಿ ಡೆಹ್ರಾಡೂನ್‌ನಲ್ಲೇ ನಡೆಯಲಿರುವ ರಾಷ್ಟ್ರೀಯ ಐಸ್ ಹಾಕಿ ಟೂರ್ನಿಯಲ್ಲಿ 14 ವರ್ಷದೊಳಗಿನವರ ಕರ್ನಾಟಕ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ.

ಪ್ರಸ್ತುತ ಬೆಂಗಳೂರಿನ ಅಕ್ಷಯನಗರದಲ್ಲಿ ವಾಸವಾಗಿರುವ ನಿಷ್ಕ್ ಅವರು ಎಲೆಕ್ಟ್ರಾನಿಕ್ ಸಿಟಿಯ ಡೆಲ್ಲಿ ಪಬ್ಲಿಕ್ ಸ್ಕೂಲ್‌ನಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ಕೇಟಿಂಗ್ ಕೋಚ್ ಶೈಖ್ ಅಬ್ದುಲ್ ಮತ್ತು ಇನ್‌ಲೈನ್ ಹಾಕಿ ಕೋಚ್ ಅಶ್ವಿನ್ ಅವರ ಮಾರ್ಗದರ್ಶನದಲ್ಲಿ ಅವರು ತರಬೇತಿ ಪಡೆದಿದ್ದಾರೆ.

ನಿಷ್ಕ್ ಅವರ ಈ ಸಾಧನೆ ಕುತ್ಲೂರು ಗ್ರಾಮಕ್ಕೆ ಹೆಮ್ಮೆ ತಂದುಕೊಟ್ಟಿದೆ. ಅವರು ಪ್ರಗತಿಪರ ಕೃಷಿಕ ಸಮೃದ್ಧಿ ಡಾಕಯ್ಯ ಪೂಜಾರಿ ಅವರ ಮೊಮ್ಮಗನಾಗಿದ್ದಾರೆ.

Related posts

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya
error: Content is protected !!