ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ 6) ಚಾಲನೆ ನೀಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿರುವ ಸಮಿತಿ, ಭಕ್ತರಿಗೆ ಉತ್ತಮ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಆರಂಭಿಸಿದೆ. ಪೂರ್ವ ಅಂಗಣದ ಛಾವಣಿ ನಿರ್ಮಾಣದಿಂದ ಮಳೆ ಹಾಗೂ ಬಿಸಿಲಿನ ತೊಂದರೆ ನಿವಾರಣೆಯಾಗಲಿದ್ದು, ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿ ಸದಸ್ಯರು, ಮೊಂಟೆತ್ತಡ್ಕ ಸಮಿತಿಯ ಅಧ್ಯಕ್ಷ ಜಿನ್ನಪ್ಪ ಗೌಡ ಮೊಂಟೆತ್ತಡ್ಕ ಮತ್ತು ಸದಸ್ಯರು, ದೀಪಕಾನಂದ, ಪುರುಷೋತ್ತಮ ಕುರುಂಬು, ಮೋನಪ್ಪ ಗೌಡ, ಚೆನ್ನಪ್ಪ ಹೆಚ್.ಎಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಂದ ಸಹಕಾರ ದೊರೆಯಲಿ ಎಂದು ಸಮಿತಿಯವರು ತಿಳಿಸಿದ್ದಾರೆ.













