25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ 6) ಚಾಲನೆ ನೀಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿರುವ ಸಮಿತಿ, ಭಕ್ತರಿಗೆ ಉತ್ತಮ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಆರಂಭಿಸಿದೆ. ಪೂರ್ವ ಅಂಗಣದ ಛಾವಣಿ ನಿರ್ಮಾಣದಿಂದ ಮಳೆ ಹಾಗೂ ಬಿಸಿಲಿನ ತೊಂದರೆ ನಿವಾರಣೆಯಾಗಲಿದ್ದು, ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿ ಸದಸ್ಯರು, ಮೊಂಟೆತ್ತಡ್ಕ ಸಮಿತಿಯ ಅಧ್ಯಕ್ಷ ಜಿನ್ನಪ್ಪ ಗೌಡ ಮೊಂಟೆತ್ತಡ್ಕ ಮತ್ತು ಸದಸ್ಯರು, ದೀಪಕಾನಂದ, ಪುರುಷೋತ್ತಮ ಕುರುಂಬು, ಮೋನಪ್ಪ ಗೌಡ, ಚೆನ್ನಪ್ಪ ಹೆಚ್.ಎಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಂದ ಸಹಕಾರ ದೊರೆಯಲಿ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya
error: Content is protected !!