May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ 6) ಚಾಲನೆ ನೀಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿರುವ ಸಮಿತಿ, ಭಕ್ತರಿಗೆ ಉತ್ತಮ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಆರಂಭಿಸಿದೆ. ಪೂರ್ವ ಅಂಗಣದ ಛಾವಣಿ ನಿರ್ಮಾಣದಿಂದ ಮಳೆ ಹಾಗೂ ಬಿಸಿಲಿನ ತೊಂದರೆ ನಿವಾರಣೆಯಾಗಲಿದ್ದು, ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿ ಸದಸ್ಯರು, ಮೊಂಟೆತ್ತಡ್ಕ ಸಮಿತಿಯ ಅಧ್ಯಕ್ಷ ಜಿನ್ನಪ್ಪ ಗೌಡ ಮೊಂಟೆತ್ತಡ್ಕ ಮತ್ತು ಸದಸ್ಯರು, ದೀಪಕಾನಂದ, ಪುರುಷೋತ್ತಮ ಕುರುಂಬು, ಮೋನಪ್ಪ ಗೌಡ, ಚೆನ್ನಪ್ಪ ಹೆಚ್.ಎಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಂದ ಸಹಕಾರ ದೊರೆಯಲಿ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!