24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ 6) ಚಾಲನೆ ನೀಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿರುವ ಸಮಿತಿ, ಭಕ್ತರಿಗೆ ಉತ್ತಮ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಆರಂಭಿಸಿದೆ. ಪೂರ್ವ ಅಂಗಣದ ಛಾವಣಿ ನಿರ್ಮಾಣದಿಂದ ಮಳೆ ಹಾಗೂ ಬಿಸಿಲಿನ ತೊಂದರೆ ನಿವಾರಣೆಯಾಗಲಿದ್ದು, ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿ ಸದಸ್ಯರು, ಮೊಂಟೆತ್ತಡ್ಕ ಸಮಿತಿಯ ಅಧ್ಯಕ್ಷ ಜಿನ್ನಪ್ಪ ಗೌಡ ಮೊಂಟೆತ್ತಡ್ಕ ಮತ್ತು ಸದಸ್ಯರು, ದೀಪಕಾನಂದ, ಪುರುಷೋತ್ತಮ ಕುರುಂಬು, ಮೋನಪ್ಪ ಗೌಡ, ಚೆನ್ನಪ್ಪ ಹೆಚ್.ಎಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಂದ ಸಹಕಾರ ದೊರೆಯಲಿ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!