25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

ಶಿಬಾಜೆ : ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆಯಲ್ಲಿ ರಾಜಾಂಗಣದ ಛಾವಣಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ದೇವಸ್ಥಾನದ ಪೂರ್ವ ಭಾಗದ ಅಂಗಣಕ್ಕೆ ಛಾವಣಿ ನಿರ್ಮಾಣ ಮಾಡುವ ದ್ವಿತೀಯ ಹಂತದ ಕಾಮಗಾರಿಗೆ ಇಂದು (ಮೇ 6) ಚಾಲನೆ ನೀಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿರುವ ಸಮಿತಿ, ಭಕ್ತರಿಗೆ ಉತ್ತಮ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಆರಂಭಿಸಿದೆ. ಪೂರ್ವ ಅಂಗಣದ ಛಾವಣಿ ನಿರ್ಮಾಣದಿಂದ ಮಳೆ ಹಾಗೂ ಬಿಸಿಲಿನ ತೊಂದರೆ ನಿವಾರಣೆಯಾಗಲಿದ್ದು, ಜಾತ್ರೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿ ಸದಸ್ಯರು, ಮೊಂಟೆತ್ತಡ್ಕ ಸಮಿತಿಯ ಅಧ್ಯಕ್ಷ ಜಿನ್ನಪ್ಪ ಗೌಡ ಮೊಂಟೆತ್ತಡ್ಕ ಮತ್ತು ಸದಸ್ಯರು, ದೀಪಕಾನಂದ, ಪುರುಷೋತ್ತಮ ಕುರುಂಬು, ಮೋನಪ್ಪ ಗೌಡ, ಚೆನ್ನಪ್ಪ ಹೆಚ್.ಎಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಂದ ಸಹಕಾರ ದೊರೆಯಲಿ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!