June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಬೆಂಗಳೂರು ಸಂಸ್ಥೆಯಿಂದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.


ಕಂಪೆನಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕ ಹರಿಪ್ರಸಾದ್ ರೈ ಕೆ. ಅವರ ನೇತೃತ್ವದಲ್ಲಿ ಸಂದರ್ಶನ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಐಟಿಐಗಳಿಂದ ವಿವಿಧ ವೃತ್ತಿಗಳಲ್ಲಿ ತರಬೇತಿ ಪಡೆಯುತ್ತಿರುವ ಒಟ್ಟು 248 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹರಿಪ್ರಸಾದ್ ರೈ ಕೆ. ಅವರು, ಕೈಗಾರಿಕಾ ಕ್ಷೇತ್ರದಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವ ಐಟಿಐ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳಿದ್ದು, ಶಿಸ್ತು, ಸಮಯಪಾಲನೆ ಮತ್ತು ಪ್ರಾಯೋಗಿಕ ಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ತರುವ ಪ್ರಮುಖ ಅಂಶಗಳಾಗಿವೆ ಎಂದು ತಿಳಿಸಿದರು.ವೇಣೂರಿನ ಎಸ್.ಡಿ.ಎಂ. ಐಟಿಐಯಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ. ಆರ್. ಉಪಸ್ಥಿತರಿದ್ದರು. ನೇಮಕಾತಿ ಅಧಿಕಾರಿ ಶ್ರೇಯಸ್ ಜೈನ್ ಸಂಘಟಿಸಿ, ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ಪ್ರಕ್ರಿಯೆಗೆ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya
error: Content is protected !!