June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಹಾಸಿಗೆ ಹಿಡಿದಿರುವ ರಾಮಣ್ಣ ಗೌಡ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪೋಷಕರಾದ ಎನ್.ಜಿ ಮೋಹನ್ , ರವೀಂದ್ರನಾಥ್ ಉಚ್ಚಿಲ್ ರವರ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಹರಿದಾಸ್ ಎಸ್.ಎಂ , ಪದಾಧಿಕಾರಿಗಳಾದ ನ್ಯಾಯವಾದಿ ಸುಕನ್ಯಾ ಹರಿದಾಸ್ , ಶಿಕ್ಷಕಿ ಪರಿಮಳ , ನ್ಯಾಯವಾದಿ ಮನೋಹರ್ ರಾವ್ ನಿಡ್ಲೆ , ಉಪನ್ಯಾಸಕ ಸುಜೀತ್ ರಾವ್ ಉಜಿರೆ ರವರು ರಾಮಣ್ಣ ಗೌಡರವರಿಗೆ ವಾಟರ್ ಬೆಡ್ ಹಸ್ತಾಂತರಿಸಿದರು.

ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯು ಕಳೆದ ಹಲವಾರು ವರ್ಷಗಳಿಂದ ವಿವಿಧ ವೈದ್ಯಕೀಯ ಶಿಬಿರಗಳನ್ನು , ತರಬೇತಿಗಳನ್ನು , ಕಾರ್ಯಕ್ರಮಗಳನ್ನು , ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಂಡಿರುವುದಲ್ಲದೆ , ವೈದ್ಯಕೀಯ ಪರಿಕರಗಳು , ಉಪಕರಣಗಳನ್ನು ಅರ್ಹರಿಗೆ ವಿತರಣೆ ಮಾಡುವ ಮೂಲಕ ಇಡೀ ಜಿಲ್ಲೆಯಲ್ಲೇ ಅತ್ಯುತ್ತಮ ಕಾರ್ಯಕ್ರಮ ಸಂಘಟಿಸುತ್ತಿದೆ.

Related posts

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya
error: Content is protected !!