June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

ವೇಣೂರು: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಸಹಯೋಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ವತಿಯಿಂದ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಮೇ 3ರಂದು ನಡೆದ ಕವಿ-ಕಾವ್ಯ ಸಂಭ್ರಮ ಮತ್ತು ರತ್ನ ಸನ್ಮಾನ ಕಾರ್ಯಕ್ರಮದಲ್ಲಿ ವೇಣೂರು ನಿಟ್ಟಡೆಯ ಯಶ್ವಿತ್ ಎಚ್. ಕುಲಾಲ್‌ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಯಶ್ವಿತ್ ಬಹುಮುಖ ಪ್ರತಿಭೆಯಾಗಿದ್ದು, ಹಲವು ಸಂಸ್ಥೆಗಳಿಂದ ಪ್ರಶಸ್ತಿಗಳು ಸಂದಿವೆ. ವಾಯ್ಸ್ ಆಫ್ ಆರಾಧನ ಸಾಂಸ್ಕೃತಿಕ ಸಂಸ್ಥೆಯ ಸದಸ್ಯನಾಗಿರುತ್ತಾನೆ. ಬಂಟ್ವಾಳದ ಲಯನ್ಸ್ ಕ್ಲಬ್, ಕಾರ್ಕಳ ಲಯನ್ಸ್ ಕ್ಲಬ್ ಸೆಂಟ್ರಲ್ ಈತನ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಿದೆ. 2025ರ ಜುಲೈನಲ್ಲಿ ನಡೆದ ಏರ್ಯ ಆಳ್ವ ಫೌಂಡೇಶನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ನಡೆಸಿದ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟದ ಕವನ ಸ್ಪರ್ಧೆಯಲ್ಲಿ ಯಶ್ವಿತ್ ಎಚ್. ಕುಲಾಲ್ ದ್ವಿತೀಯ ಸ್ಥಾನ ಪಡೆದಿದ್ದಾನೆ. ಇದೀಗ ನೃತ್ಯದಲ್ಲಿ ಮೆರೆದ ಸಾಧನೆಗಾಗಿ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಸಂದಿವೆ. ಶಾಲೆಯಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲೂ ತಾಲೂಕು ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿಕೊಂಡಿರುವ ಯಶ್ವಿತ್ ನಿಟ್ಟಡೆ ಕುಂಭಶ್ರೀ ಶಾಲಾ ಬಳಿಯ ಮೋದಕ ಮನೆ ನಿವಾಸಿ ಹರೀಶ್ ಪಿ. ಮತ್ತು ಶ್ರೀಮತಿ ವನಿತಾ ಕೆ. ದಂಪತಿಯ ಪುತ್ರ.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ನೇತ್ರಾವತಿ ಪೀಕ್‌ಗೆ ಚಾರಣಿಗರ ಆಗಮನ ಶುರು: ಟ್ರೆಕ್ಕಿಂಗಳ ಸುರಕ್ಷತೆಗಾಗಿ ಅಲ್ಲಲ್ಲಿ ಸೂಚನ ಪಲಕ, ೧೧೫ ಟ್ರೆಕ್ ಗೈಡ್‌ಗಳ ನೇಮಕ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!