August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಬೆಂಗಳೂರು ಸಂಸ್ಥೆಯಿಂದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.


ಕಂಪೆನಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕ ಹರಿಪ್ರಸಾದ್ ರೈ ಕೆ. ಅವರ ನೇತೃತ್ವದಲ್ಲಿ ಸಂದರ್ಶನ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಐಟಿಐಗಳಿಂದ ವಿವಿಧ ವೃತ್ತಿಗಳಲ್ಲಿ ತರಬೇತಿ ಪಡೆಯುತ್ತಿರುವ ಒಟ್ಟು 248 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹರಿಪ್ರಸಾದ್ ರೈ ಕೆ. ಅವರು, ಕೈಗಾರಿಕಾ ಕ್ಷೇತ್ರದಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವ ಐಟಿಐ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳಿದ್ದು, ಶಿಸ್ತು, ಸಮಯಪಾಲನೆ ಮತ್ತು ಪ್ರಾಯೋಗಿಕ ಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ತರುವ ಪ್ರಮುಖ ಅಂಶಗಳಾಗಿವೆ ಎಂದು ತಿಳಿಸಿದರು.ವೇಣೂರಿನ ಎಸ್.ಡಿ.ಎಂ. ಐಟಿಐಯಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ. ಆರ್. ಉಪಸ್ಥಿತರಿದ್ದರು. ನೇಮಕಾತಿ ಅಧಿಕಾರಿ ಶ್ರೇಯಸ್ ಜೈನ್ ಸಂಘಟಿಸಿ, ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ಪ್ರಕ್ರಿಯೆಗೆ ಸಹಕರಿಸಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!