ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಹಾಸಿಗೆ ಹಿಡಿದಿರುವ ರಾಮಣ್ಣ ಗೌಡ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪೋಷಕರಾದ ಎನ್.ಜಿ ಮೋಹನ್ , ರವೀಂದ್ರನಾಥ್ ಉಚ್ಚಿಲ್ ರವರ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಹರಿದಾಸ್ ಎಸ್.ಎಂ , ಪದಾಧಿಕಾರಿಗಳಾದ ನ್ಯಾಯವಾದಿ ಸುಕನ್ಯಾ ಹರಿದಾಸ್ , ಶಿಕ್ಷಕಿ ಪರಿಮಳ , ನ್ಯಾಯವಾದಿ ಮನೋಹರ್ ರಾವ್ ನಿಡ್ಲೆ , ಉಪನ್ಯಾಸಕ ಸುಜೀತ್ ರಾವ್ ಉಜಿರೆ ರವರು ರಾಮಣ್ಣ ಗೌಡರವರಿಗೆ ವಾಟರ್ ಬೆಡ್ ಹಸ್ತಾಂತರಿಸಿದರು.
ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯು ಕಳೆದ ಹಲವಾರು ವರ್ಷಗಳಿಂದ ವಿವಿಧ ವೈದ್ಯಕೀಯ ಶಿಬಿರಗಳನ್ನು , ತರಬೇತಿಗಳನ್ನು , ಕಾರ್ಯಕ್ರಮಗಳನ್ನು , ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಂಡಿರುವುದಲ್ಲದೆ , ವೈದ್ಯಕೀಯ ಪರಿಕರಗಳು , ಉಪಕರಣಗಳನ್ನು ಅರ್ಹರಿಗೆ ವಿತರಣೆ ಮಾಡುವ ಮೂಲಕ ಇಡೀ ಜಿಲ್ಲೆಯಲ್ಲೇ ಅತ್ಯುತ್ತಮ ಕಾರ್ಯಕ್ರಮ ಸಂಘಟಿಸುತ್ತಿದೆ.













