August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಹಾಸಿಗೆ ಹಿಡಿದಿರುವ ರಾಮಣ್ಣ ಗೌಡ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪೋಷಕರಾದ ಎನ್.ಜಿ ಮೋಹನ್ , ರವೀಂದ್ರನಾಥ್ ಉಚ್ಚಿಲ್ ರವರ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಹರಿದಾಸ್ ಎಸ್.ಎಂ , ಪದಾಧಿಕಾರಿಗಳಾದ ನ್ಯಾಯವಾದಿ ಸುಕನ್ಯಾ ಹರಿದಾಸ್ , ಶಿಕ್ಷಕಿ ಪರಿಮಳ , ನ್ಯಾಯವಾದಿ ಮನೋಹರ್ ರಾವ್ ನಿಡ್ಲೆ , ಉಪನ್ಯಾಸಕ ಸುಜೀತ್ ರಾವ್ ಉಜಿರೆ ರವರು ರಾಮಣ್ಣ ಗೌಡರವರಿಗೆ ವಾಟರ್ ಬೆಡ್ ಹಸ್ತಾಂತರಿಸಿದರು.

ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯು ಕಳೆದ ಹಲವಾರು ವರ್ಷಗಳಿಂದ ವಿವಿಧ ವೈದ್ಯಕೀಯ ಶಿಬಿರಗಳನ್ನು , ತರಬೇತಿಗಳನ್ನು , ಕಾರ್ಯಕ್ರಮಗಳನ್ನು , ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಂಡಿರುವುದಲ್ಲದೆ , ವೈದ್ಯಕೀಯ ಪರಿಕರಗಳು , ಉಪಕರಣಗಳನ್ನು ಅರ್ಹರಿಗೆ ವಿತರಣೆ ಮಾಡುವ ಮೂಲಕ ಇಡೀ ಜಿಲ್ಲೆಯಲ್ಲೇ ಅತ್ಯುತ್ತಮ ಕಾರ್ಯಕ್ರಮ ಸಂಘಟಿಸುತ್ತಿದೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!