August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

ವೇಣೂರು: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಸಹಯೋಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ವತಿಯಿಂದ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಮೇ 3ರಂದು ನಡೆದ ಕವಿ-ಕಾವ್ಯ ಸಂಭ್ರಮ ಮತ್ತು ರತ್ನ ಸನ್ಮಾನ ಕಾರ್ಯಕ್ರಮದಲ್ಲಿ ವೇಣೂರು ನಿಟ್ಟಡೆಯ ಯಶ್ವಿತ್ ಎಚ್. ಕುಲಾಲ್‌ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಯಶ್ವಿತ್ ಬಹುಮುಖ ಪ್ರತಿಭೆಯಾಗಿದ್ದು, ಹಲವು ಸಂಸ್ಥೆಗಳಿಂದ ಪ್ರಶಸ್ತಿಗಳು ಸಂದಿವೆ. ವಾಯ್ಸ್ ಆಫ್ ಆರಾಧನ ಸಾಂಸ್ಕೃತಿಕ ಸಂಸ್ಥೆಯ ಸದಸ್ಯನಾಗಿರುತ್ತಾನೆ. ಬಂಟ್ವಾಳದ ಲಯನ್ಸ್ ಕ್ಲಬ್, ಕಾರ್ಕಳ ಲಯನ್ಸ್ ಕ್ಲಬ್ ಸೆಂಟ್ರಲ್ ಈತನ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಿದೆ. 2025ರ ಜುಲೈನಲ್ಲಿ ನಡೆದ ಏರ್ಯ ಆಳ್ವ ಫೌಂಡೇಶನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ನಡೆಸಿದ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟದ ಕವನ ಸ್ಪರ್ಧೆಯಲ್ಲಿ ಯಶ್ವಿತ್ ಎಚ್. ಕುಲಾಲ್ ದ್ವಿತೀಯ ಸ್ಥಾನ ಪಡೆದಿದ್ದಾನೆ. ಇದೀಗ ನೃತ್ಯದಲ್ಲಿ ಮೆರೆದ ಸಾಧನೆಗಾಗಿ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಸಂದಿವೆ. ಶಾಲೆಯಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲೂ ತಾಲೂಕು ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿಕೊಂಡಿರುವ ಯಶ್ವಿತ್ ನಿಟ್ಟಡೆ ಕುಂಭಶ್ರೀ ಶಾಲಾ ಬಳಿಯ ಮೋದಕ ಮನೆ ನಿವಾಸಿ ಹರೀಶ್ ಪಿ. ಮತ್ತು ಶ್ರೀಮತಿ ವನಿತಾ ಕೆ. ದಂಪತಿಯ ಪುತ್ರ.

Related posts

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya
error: Content is protected !!