August 10, 2026
ತಾಲೂಕು ಸುದ್ದಿಧಾರ್ಮಿಕಶುಭಾರಂಭ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟಿ ಎಂಬಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ವರ್ಷಪ್ರತಿ ಶ್ರೀ ಮಾರಿಪೂಜೆ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ.

ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಮಹಾಪೂಜೆಯ ಅಂಗವಾಗಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ, ಋತ್ವಿಜರ ಆಗಮನ, ಅಲಯ ಪರಿಗ್ರಂತ ಪ್ರಾರ್ಥನೆ ತೋರಣ ಮುಹೂರ್ತ, ಮಹಮ್ಮಾಯಿ ಅಮ್ಮನವರ ನೂತನ ಮೂರ್ತಿಯ ವೈಭವದ ಮೆರವಣಿಗೆ ಹಾಗೂ ಹಸಿರುವಾಣಿ ಹೊರೆಕಾಣಿಕೆಯ ಮೆರವಣಿಗೆ ಬದ್ಯಾರು ಶಾಲಾ ಬಳಿಯಿಂದ ಕೋಟಿಕಟ್ಟೆ ಶ್ರೀ ಮಹಮ್ಮಾಯಿ ಸನ್ನಿದಿಯ ತನಕ ನಡೆಯಿತು.

ಸಂಜೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು, ಶಾರದಾಂಬ ಭಜನಾ ಮಂಡಳಿ ಮುಂಡೂರು ಮತ್ತು ಶ್ರೀ ನಾಗಾಂಬಿಕ ಭಜನಾ ಮಂಡಳಿ ಮಂಗಳಗಿರಿ ಮುಂಡೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ಕೆ.ಎಸ್ ಮತ್ತು ಬೆಳ್ತಂಗಡಿ ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ನವಮಿ ಅವರು ಭಜನಾ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿ ಗೌರವ ಅಧ್ಯಕ್ಷರಾಗಿ ಕೆ. ಗುರುವಪ್ಪ ಸಾಲಿಯಾನ್ ಕೇರಿಮಾರ್, ಗೌರವ ಮಾರ್ಗದರ್ಶಕರಾದ ರಂಗನಾಥ ನೂರಿತ್ತಾಯ ಗೋಪಾಲಕೃಷ್ಣ ದೇವಸ್ಥಾನ ಖಂಡಿಗ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಕಡಂಬು, ಪ್ರಕಾರ್ಯದರ್ಶಿ ಸಂತೋಷ್ ಕುಮಾರ್ ಮೇಗಿನಕಿನಿಂಜೆ, ಕೋಶಾಧಿಕಾರಿ ಬೋಜ ಪೂಜಾರಿ ಮಜಲು, ಶ್ರೀ ಮಹಮ್ಮಾಯಿ ಸೇವಾ ಸಮಿತಿ ಅಧ್ಯಕ್ಷ ರಾಜೇಂದ್ರ ಪೂಜಾರಿ, ಪ್ರಕಾರ್ಯದರ್ಶಿ ಅಶೋಕ್ ಕುಮಾರ್ ಕೊಡಕ್ಕಾಲು, ಕೋಶಾಧಿಕಾರಿ ಪ್ರಕಾಶ್ ಪೂಜಾರಿ ಕೋಡೈಲ್, ಪ್ರಮುಖರಾದ ರಮಾನಂದ ಸಾಲಿಯಾನ್ ಮುಂಡೂರು, ರಾಜೀವ ಸಾಲಿಯಾನ್ ಮುಂಡೂರು ಹಾಗೂ ಭಕ್ತರು ಉಪಸ್ಥಿತರಿದ್ದರು.

ನಾಳೆ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಮಹಾಕುಂಭಾಭಿಷೇಕ: ಮೇ.8ರಂದು ಬೆಳಿಗ್ಗೆ ಗಂಟೆ 6:30ಕ್ಕೆ ಗಣಹೋಮ, ಪ್ರತಿಷ್ಠಾ ಹೋಮ, ಪ್ರತಿಷ್ಟಾ ಕಲಶ ಪೂಜೆ, ಬೆಳಿಗ್ಗೆ ಗಂಟೆ 9:51ಕ್ಕೆ ಮಿಥುನ ಲಗ್ನ ಸುಮುಹೂರ್ತದಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಮಹಾಕುಂಭಾಭಿಷೇಕ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮೇ.9ರಂದು ಶ್ರೀ ಮಹಮ್ಮಾಯಿ ಅಮ್ಮನವರ ಪುನಃ ಪ್ರತಿಷ್ಠೆಯ ಅಂಗವಾಗಿ ವಿಶೇಷ ಮಾರಿಪೂಜೆ ನಡೆಯಲಿದ್ದು, ಕ್ಷೇತ್ರದಲ್ಲಿ ಅಪರಾಹ್ನ ಗಂಟೆ 3 ಕ್ಕೆ ಗದ್ದಿಗೆ ಪೂಜೆ, ರಾತ್ರಿ ಗಂಟೆ 9.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya
error: Content is protected !!