August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ನೀಡಿ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೆಯ ಸಾಲಿನ ಪ್ರಥಮ ವರ್ಷಕ್ಕೆ ಪ್ರವೇಶಾತಿ ಆರಂಭಗೊಂಡಿದೆ.

ಕಾಲೇಜಿನ ವೈಶಿಷ್ಟ್ಯಗಳು :

ಬಹು ಬೇಡಿಕೆಯ 1. ಸಿವಿಲ್ ಇಂಜಿನಿಯರಿಂಗ್, 2.ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ 3.ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ , ಮೆಕಾನಿಕಲ್ ಇಂಜಿನಿಯರಿಂಗ್ ಎಂಬ ಕೋರ್ಸುಗಳು.

  • ಆಡಿಯೋ/ವಿಡಿಯೋ ತರಗತಿಗಳ ಜೊತೆ ನುರಿತ ಪ್ರಾಧ್ಯಾಪಕ ವರ್ಗ.
  • ಶೇಕಡಾ 100% ಉದ್ಯೋಗಾವಕಾಶ
  • ಹಾಸ್ಟೆಲ್ ಸೌಲಭ್ಯ
  • ಸುಸಜ್ಜಿತ ಗ್ರಂಥಾಲಯ ಮತ್ತು ಪ್ರಯೋಗಾಲಯಗಳು
  • ಸಿವಿಲ್ ಇಂಜಿನಿಯರಿಂಗ್ ಸೀಟುಗಳು ರಿಯಾಯಿತಿ ಶುಲ್ಕದೊಂದಿಗೆ ಲಭ್ಯವಿದೆ.
  • Bosch company ಪ್ರಾಯೋಜಿತ ವಿಶೇಷ ತಂತ್ರಜ್ಞಾನ ಆಧಾರಿತ ಪ್ರಯೋಗಾಲಯ
  • ಇಂಜಿನಿಯರಿಂಗ್ ಉನ್ನತ ವ್ಯಾಸಂಗ ಬಯಸುವ ವಿದ್ಯಾರ್ಥಿಗಳಿಗೆ DCET ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ಸೌಲಭ್ಯ.
  • ಭಾರತ ಸರ್ಕಾರದ AICTE ಮತ್ತು ಕರ್ನಾಟಕ ಸರ್ಕಾರದ DTE ನಿಂದ ಮಾನ್ಯತೆ ಪಡೆದ ಸಂಸ್ಥೆ "Putting value into Education" ಎಂಬ ವಿಶೇಷ ಧ್ಯೆಯ ವಾಕ್ಯದಡಿ ನಡೆಯುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯಿಂದ ನಡೆಸಲ್ಪಡುತ್ತಿರುವ ಕಾಲೇಜು ಇದಾಗಿದೆ. 2025-26ನೆಯ ಸಾಲಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಕಾಲೇಜಿನಿಂದಲೇ ನೇರ ನೇಮಕಾತಿ ನಡೆಸಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳಾದ BOSCH, Tata Consulting Engineers, TVS, Toyota Kirlosker Motor Pvt Ltd, Asian Paints, Schnieder electric, Centum Electronics, Unimac Aerospace, Kirloskar Electric, Qcrete Readymix, Sindhu Corporation, Technolab Solutions,Wipro GE Health care, Volvo Group India, TATA Electronics ಇಂತಹ ಸುಮಾರು 45ಕ್ಕೂ ಹೆಚ್ಚು ಕಂಪನಿಗಳು ಸುಮಾರು 150ಕ್ಕೂ ಹೆಚ್ಚು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ಈ ಬಾರಿಯು ಉದ್ಯೋಗಾವಕಾಶವನ್ನು ಕಲ್ಪಿಸಿದೆ. ಪ್ರಥಮ ವರ್ಷಕ್ಕೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ದಾಖಲಾತಿ ಆರಂಭಗೊಂಡಿದ್ದು ತಾಂತ್ರಿಕ ಶಿಕ್ಷಣ ಬಯಸುವವರು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9845893731/9880724085/ 9740840503 ನಂಬರ್ ಅನ್ನು ಸಂಪರ್ಕಿಸಿ.

Related posts

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya
error: Content is protected !!