June 24, 2026
Uncategorized

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಕುವೆಟ್ಟು ಇದರ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಮೇ 04 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ಶಿಬಿರಕ್ಕೆ ಚಾಲನೆ ನೀಡಿದರು ಐದು ದಿವಸಗಳಿಂದ ಮಕ್ಕಳಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆ ಗಳನ್ನು ನಡೆಸಲಾಯಿತು ಸುಗಮಗಾ ರರಾಗಿ ಆನಂದ ಕೋಟ್ಯಾನ್ ಯೋಗಾಸನ ದ ವಿವಿಧ ಪ್ರಕಾರಗಳು. ಭುವನ್ ಮಕ್ಕಳಿಗೆ ಮನೋರಂಜನೆ ಯನ್ನು, ಸುಲೋಚನಾ ಇವರು ವಿವಿಧ ರೀತಿಯ ಆಟೋಟ ಗಳನ್ನು, ಕುಮಾರಿ ಭುವನೇಶ್ವರಿ ಮಕ್ಕಳಿಗೆ ಕ್ರ್ಯಾಪ್ಟ್ ನ ವಿವಿಧ ಚಟುವಟಿಕೆಗಳನ್ನು, ಜಾಲಜಾಕ್ಷಿ ಇವರು ಮಕ್ಕಳಿಗೆ ಆರೋಗ್ಯ ಮಾಹಿತಿ ಯನ್ನು ನೀಡಿರುತ್ತಾರೆ.

ಶಿಬಿರದಲ್ಲಿ ಹಾಡು ಕುಣಿತ ಗೇಮ್ಸ್, ಓದುವುದು, ಕ್ವಿಜ್ ಸ್ಮರಣೆ ಶಕ್ತಿ ಇವುಗಳನ್ನು ಕೂಡ ಮಕ್ಕಳಿಗೆ ನಡೆಸಲಾಯಿತು. ಸಮಾರೋಪ ಸಮಾರಂಭ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಇಮ್ತಿಯಾಜ್ , ಕಾರ್ಯದರ್ಶಿ ಶ್ರೀಮತಿ ಸೇವಂತಿ ಪಂಚಾಯತ್ ಸಿಬ್ಬಂದಿ ಆನಂದ್ ಕೋಟ್ಯಾನ್ ಇವರು ಭಾಗವಹಿಸಿ ಮಕ್ಕಳಿಗೆ ಹಿತವಚನ ನೀಡಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ಪುಸ್ತಕ ಮತ್ತು ಪೆನ್ ವಿತರಣೆ ಮಾಡಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಯಶೋಧ ಶ್ರೀಮತಿ ಸೌಮ್ಯ ದಿಲೀಪ್ ಕುಲಾಲ್ ಸುಲೋಚನಾ ಇವರು ಕಾರ್ಯಕ್ರಮದಲ್ಲಿ ಸಹಕರಿಸಿ ಗ್ರಂಥಾಲಯ ಮೇಲ್ವಿಚಾರಕರು ಶ್ರೀಮತಿ ವಸಂತಿ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya
error: Content is protected !!