August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ತಾಲೂಕು ತಹಶೀಲ್ದಾರರು ಹಾಗೂ ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

SDPI ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಗಮಿಸುವ ಬಡ ಹಾಗೂ ಸಾಮಾನ್ಯ ರೋಗಿಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಲಾಗಿದೆ. ಆಸ್ಪತ್ರೆಯಲ್ಲಿ NS ಡ್ರಿಪ್ಸ್, ಕ್ಯಾನೂಲಾ, ಗ್ಲವ್ಸ್, ಮಾಸ್ಕ್ ಸೇರಿದಂತೆ ಅಗತ್ಯ ವೈದ್ಯಕೀಯ ಸಾಮಗ್ರಿಗಳ ಕೊರತೆಯಿಂದ ಅನೇಕ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸಲಾಗುತ್ತಿದೆ ಎಂಬ ದೂರು ಸಾರ್ವಜನಿಕರಿಂದ ಕೇಳಿಬರುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಪುರುಷರ ವಾರ್ಡ್‌ನಲ್ಲಿರುವ ಹಲವು ಫ್ಯಾನ್‌ಗಳು ಕಳೆದ ಒಂದು ತಿಂಗಳಿನಿಂದ ಕೆಟ್ಟು ನಿಂತಿದ್ದರೂ ದುರಸ್ತಿ ಮಾಡಲಾಗಿಲ್ಲ. ತುರ್ತು ಸೇವೆಗಾಗಿ ಇರುವ ಆಂಬುಲೆನ್ಸ್‌ಗಳಿಗೆ ಡೀಸೆಲ್ ಇಲ್ಲ ಎಂಬ ಕಾರಣ ನೀಡಿ ಸೇವೆ ನೀಡಲಾಗುತ್ತಿಲ್ಲ ಎಂಬ ಗಂಭೀರ ಆರೋಪಗಳನ್ನೂ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.ಈ ಎಲ್ಲಾ ಸಮಸ್ಯೆಗಳು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತಿದ್ದು, ಸಾರ್ವಜನಿಕ ಆರೋಗ್ಯ ಸೇವೆಯ ಮೇಲೆ ಜನರ ವಿಶ್ವಾಸ ಕುಸಿಯುವಂತಾಗಿದೆ ಎಂದು SDPI ಆತಂಕ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ ಹಾಗೂ ವೈದ್ಯಕೀಯ ಸಾಮಗ್ರಿಗಳ ಸಮರ್ಪಕ ದಾಸ್ತಾನು ಒದಗಿಸುವುದು, ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದು, ವಾರ್ಡ್‌ನಲ್ಲಿರುವ ಕೆಟ್ಟ ಫ್ಯಾನ್‌ಗಳನ್ನು ತಕ್ಷಣ ದುರಸ್ತಿ ಮಾಡಿಸುವುದು, ಆಂಬುಲೆನ್ಸ್ ಸೇವೆಯನ್ನು ನಿರಂತರವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತೆ ಆಸ್ಪತ್ರೆಯ ಆಡಳಿತ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಬೇಕು ಎಂದು SDPI ಒತ್ತಾಯಿಸಿದೆ.

ಮನವಿ ಸಲ್ಲಿಸಿದ ಬಳಿಕ SDPI ಮುಖಂಡರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಹಾಗೂ ರೋಗಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಕ್ಷೇತ್ರ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿಹ್ ಮದ್ದಡ್ಕ, ಅಶ್ರಫ್ ಕಟ್ಟೆ, ನಗರ ಸಮಿತಿ ಅಧ್ಯಕ್ಷ ರಿಯಾಝ್ ಬೆಳ್ತಂಗಡಿ, ಉಜಿರೆ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ, ರಶೀದ್ ಲಾಯಿಲ, ಸ್ವಾದಿಕ್ ಲಾಯಿಲ ಉಪಸ್ಥಿತರಿದ್ದರು.

Related posts

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
error: Content is protected !!