August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.


ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸ್ನೇಕ್ ಅನಿಲ್ ಅವರಿಗೆ ಮೇ 6ರಂದು ಮಾಹಿತಿ ನೀಡಿದರು. ಈ ವೇಳೆ ಆಗಮಿಸಿದ ಅವರು ತಾಯಿ ನಾಗರಹಾವನ್ನು ಹಿಡಿದಿದ್ದು ಈ ವೇಳೆ ಗೋಡೆಯಲ್ಲಿ ಮರಿಗಳು ಕಂಡು ಬಂದವು. ಗೋಡೆಯಲ್ಲಿದ್ದ 26 ಮರಿಗಳನ್ನು ಹಿಡಿದು ಅವುಗಳನ್ನು ತಾಯಿ ಸಹಿತ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದ ಸುರಕ್ಷಿತ ಜಾಗದಲ್ಲಿ ಮೇ 7ರಂದು ಬಿಡಲಾಗಿದೆ.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸಹಕರಿಸಿದರು. ಈ ಮರಿಗಳು ಸುಮಾರು 10 ದಿನಗಳ ಹಿಂದೆ ಮೊಟ್ಟೆಯಿಂದ ಹೊರಬಂದಿರಬಹುದು ಎಂದು ಅಂದಾಜಿಸಲಾಗಿದ್ದು ಎಲ್ಲವೂ ಆರೋಗ್ಯ ಪೂರ್ಣವಾಗಿ ಇರುವುದಾಗಿ ಅನಿಲ್ ಅವರು ತಿಳಿಸಿದ್ದಾರೆ.


ಕಳೆದ ಕೆಲವು ದಿನಗಳ ಹಿಂದೆ ನೆರಿಯ ಗ್ರಾಮದ ಗುಂಡಿಕಂಡ ಎಂಬಲ್ಲಿ ಮನೆಯ ಗೋಡೆಯೊಂದರಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ಅನಿಲ್ ಅವರು ರಕ್ಷಿಸಿ ಅವುಗಳಿಗೆ ಕೃತಕ ಕಾವು ನೀಡಿ ಮರಿಗಳು ಹೊರಬಂದ ಬಳಿಕ ಭಾನುವಾರ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದರು. ಈ ಮೊಟ್ಟೆಗಳನ್ನು ಇರುವೆಗಳ ದಾಳಿಯಿಂದ ರಕ್ಷಿಸಲಾಗಿತ್ತು.

Related posts

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya
error: Content is protected !!