August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ವಜಾಗೊಂಡಿದೆ.

ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಜತೆ ಮೊಬೈಲ್‌ನಲ್ಲಿ ಮಾತನಾಡುವ ವೇಳೆ ಮಹೇಶ್‌ ಶೆಟ್ಟಿ ತಿಮರೋಡಿ, ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಹಾಗೂ ಅವರ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ದಿನೇಶ್ ಅವರ ತಾಯಿ ಲೀಲಾವತಿ ಶೆಟ್ಟಿಗಾರ್ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಲಾವಿದರಾದ ಸುಂದರ ರೈ, ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರಿ ಅಭಿಯೋಜಕ ಮೋಹನ್ ಕುಮಾ‌ರ್ ಬಿ. ವಾದ ಮಂಡಿಸಿದ್ದರು.

Related posts

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!