June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಮೇ 4 ರಿಂದ ಪ್ರಾರಂಭಗೊಂಡು ಮೇ8 ರಂದು ಸಮಾರೋಪ ಸಮಾರಂಭ ನಡೆಯಿತು.

ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ, ಎಸ್.ಡಿ.ಎಂ ಸಿಎನ್.ವೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ, ಶಿಬಿರ ನಿರ್ದೇಶಕರಾದ ಡಾ.ರವಿ ಎಂ ಎನ್, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಶಿವಪ್ರಸಾದ್ ಶೆಟ್ಟಿ, ನ್ಯೂಟ್ರಿಷನ್ ವಿಭಾಗದ ಮುಖ್ಯಸ್ಥೆ ಗೀತಾ ಬಿ ಶೆಟ್ಟಿ ಉಪಸ್ಥಿತರಿದ್ದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ವತಿಯಿಂದ ಎಸ್ ಡಿ ಎಂ ಸಿಎನ್ ವೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಾದ ಪ್ರಥಮ್, ದೀಕ್ಷಾ, ರೋಷನ್, ಲಕ್ಷ್ಮೀ ಹಾಗೂ ಸ್ಕೌಟ್ಸ್ ಮಾಸ್ಟರ್ ರವಿ ಕುಮಾರ್, ಗೈಡ್ಸ್ ವಿಭಾಗದ ಆರತಿ ಅವರು ಶಿಬಿರದ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಡಾ. ಅನನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya
error: Content is protected !!