May 8, 2026
Uncategorized

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಕುವೆಟ್ಟು ಇದರ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಮೇ 04 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ಶಿಬಿರಕ್ಕೆ ಚಾಲನೆ ನೀಡಿದರು ಐದು ದಿವಸಗಳಿಂದ ಮಕ್ಕಳಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆ ಗಳನ್ನು ನಡೆಸಲಾಯಿತು ಸುಗಮಗಾ ರರಾಗಿ ಆನಂದ ಕೋಟ್ಯಾನ್ ಯೋಗಾಸನ ದ ವಿವಿಧ ಪ್ರಕಾರಗಳು. ಭುವನ್ ಮಕ್ಕಳಿಗೆ ಮನೋರಂಜನೆ ಯನ್ನು, ಸುಲೋಚನಾ ಇವರು ವಿವಿಧ ರೀತಿಯ ಆಟೋಟ ಗಳನ್ನು, ಕುಮಾರಿ ಭುವನೇಶ್ವರಿ ಮಕ್ಕಳಿಗೆ ಕ್ರ್ಯಾಪ್ಟ್ ನ ವಿವಿಧ ಚಟುವಟಿಕೆಗಳನ್ನು, ಜಾಲಜಾಕ್ಷಿ ಇವರು ಮಕ್ಕಳಿಗೆ ಆರೋಗ್ಯ ಮಾಹಿತಿ ಯನ್ನು ನೀಡಿರುತ್ತಾರೆ.

ಶಿಬಿರದಲ್ಲಿ ಹಾಡು ಕುಣಿತ ಗೇಮ್ಸ್, ಓದುವುದು, ಕ್ವಿಜ್ ಸ್ಮರಣೆ ಶಕ್ತಿ ಇವುಗಳನ್ನು ಕೂಡ ಮಕ್ಕಳಿಗೆ ನಡೆಸಲಾಯಿತು. ಸಮಾರೋಪ ಸಮಾರಂಭ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಇಮ್ತಿಯಾಜ್ , ಕಾರ್ಯದರ್ಶಿ ಶ್ರೀಮತಿ ಸೇವಂತಿ ಪಂಚಾಯತ್ ಸಿಬ್ಬಂದಿ ಆನಂದ್ ಕೋಟ್ಯಾನ್ ಇವರು ಭಾಗವಹಿಸಿ ಮಕ್ಕಳಿಗೆ ಹಿತವಚನ ನೀಡಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ಪುಸ್ತಕ ಮತ್ತು ಪೆನ್ ವಿತರಣೆ ಮಾಡಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಯಶೋಧ ಶ್ರೀಮತಿ ಸೌಮ್ಯ ದಿಲೀಪ್ ಕುಲಾಲ್ ಸುಲೋಚನಾ ಇವರು ಕಾರ್ಯಕ್ರಮದಲ್ಲಿ ಸಹಕರಿಸಿ ಗ್ರಂಥಾಲಯ ಮೇಲ್ವಿಚಾರಕರು ಶ್ರೀಮತಿ ವಸಂತಿ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya
error: Content is protected !!